25 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : “ಹೃದಯ ಹಾಗೂ ಮನಸ್ಸಿನಿಂದ ನಾವೆಲ್ಲ ಒಂದಾಗೋಣ, ಯಾರೂ ನಮ್ಮನ್ನು ಮುರಿಯಲು ಬಿಡದಿರೋಣ, ಆಗ ಮಾತ್ರ ನಾವು ಸ್ವಾತಂತ್ರ್ಯರು ಎಂದು ಅನಿಸಿಕೊಳ್ಳುವುದು”. ತತ್ವದ ಅಡಿಯಲ್ಲಿ ಮನ್ ಶರ್ ವಿದ್ಯಾ ಸಂಸ್ಥೆ ಗೇರುಕಟ್ಟೆ ಇಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳ ಪರೇಡ್ ಮುಖೇನ ವಿದ್ಯಾಸಂಸ್ಥೆಯ ಜನರಲ್ ಮ್ಯಾನೇಜರ್ ಆದ ಹೈದರ್ ಮರ್ದಾಳ ಇವರು ಧ್ವಜಾರೋಹಣವನ್ನು ನೆರವೇರಿಸಿ, ಭಾರತ ಗಣರಾಜ್ಯದ ಸಂಪೂರ್ಣ ಸವಿವರವನ್ನು ವಿದ್ಯಾರ್ಥಿಗಳ ಮನಮುಟ್ಟುವಂತೆ ತಿಳಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೌಸರ್ ಪಲ್ಲಾದೆ ಇವರು ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಕಾರ್ಯವನ್ನು ನಿರ್ವಹಿಸಿದರು. ಹಾಗೆಯೇ ಪುಟಾಣಿ ಮಕ್ಕಳಿಂದ ಕಲರವಭರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.


ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಉಷಾ ಸ್ವಾಗತಿಸಿದರು, ಕೌಸರ್ ಪಲ್ಲಾದೆ ವಂದಿಸಿದರು. ಪಿಯುಸಿ ಉಪನ್ಯಾಸಕರಾದ ಹಂಸಶ್ರೀ ಬಿ.ಆರ್ ಕಾರ್ಯಕ್ರಮ ನಿರೂಪಿಸಿದರು.

Related posts

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!