25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : “ಹೃದಯ ಹಾಗೂ ಮನಸ್ಸಿನಿಂದ ನಾವೆಲ್ಲ ಒಂದಾಗೋಣ, ಯಾರೂ ನಮ್ಮನ್ನು ಮುರಿಯಲು ಬಿಡದಿರೋಣ, ಆಗ ಮಾತ್ರ ನಾವು ಸ್ವಾತಂತ್ರ್ಯರು ಎಂದು ಅನಿಸಿಕೊಳ್ಳುವುದು”. ತತ್ವದ ಅಡಿಯಲ್ಲಿ ಮನ್ ಶರ್ ವಿದ್ಯಾ ಸಂಸ್ಥೆ ಗೇರುಕಟ್ಟೆ ಇಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳ ಪರೇಡ್ ಮುಖೇನ ವಿದ್ಯಾಸಂಸ್ಥೆಯ ಜನರಲ್ ಮ್ಯಾನೇಜರ್ ಆದ ಹೈದರ್ ಮರ್ದಾಳ ಇವರು ಧ್ವಜಾರೋಹಣವನ್ನು ನೆರವೇರಿಸಿ, ಭಾರತ ಗಣರಾಜ್ಯದ ಸಂಪೂರ್ಣ ಸವಿವರವನ್ನು ವಿದ್ಯಾರ್ಥಿಗಳ ಮನಮುಟ್ಟುವಂತೆ ತಿಳಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೌಸರ್ ಪಲ್ಲಾದೆ ಇವರು ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಕಾರ್ಯವನ್ನು ನಿರ್ವಹಿಸಿದರು. ಹಾಗೆಯೇ ಪುಟಾಣಿ ಮಕ್ಕಳಿಂದ ಕಲರವಭರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.


ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಉಷಾ ಸ್ವಾಗತಿಸಿದರು, ಕೌಸರ್ ಪಲ್ಲಾದೆ ವಂದಿಸಿದರು. ಪಿಯುಸಿ ಉಪನ್ಯಾಸಕರಾದ ಹಂಸಶ್ರೀ ಬಿ.ಆರ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya
error: Content is protected !!