September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : “ಹೃದಯ ಹಾಗೂ ಮನಸ್ಸಿನಿಂದ ನಾವೆಲ್ಲ ಒಂದಾಗೋಣ, ಯಾರೂ ನಮ್ಮನ್ನು ಮುರಿಯಲು ಬಿಡದಿರೋಣ, ಆಗ ಮಾತ್ರ ನಾವು ಸ್ವಾತಂತ್ರ್ಯರು ಎಂದು ಅನಿಸಿಕೊಳ್ಳುವುದು”. ತತ್ವದ ಅಡಿಯಲ್ಲಿ ಮನ್ ಶರ್ ವಿದ್ಯಾ ಸಂಸ್ಥೆ ಗೇರುಕಟ್ಟೆ ಇಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳ ಪರೇಡ್ ಮುಖೇನ ವಿದ್ಯಾಸಂಸ್ಥೆಯ ಜನರಲ್ ಮ್ಯಾನೇಜರ್ ಆದ ಹೈದರ್ ಮರ್ದಾಳ ಇವರು ಧ್ವಜಾರೋಹಣವನ್ನು ನೆರವೇರಿಸಿ, ಭಾರತ ಗಣರಾಜ್ಯದ ಸಂಪೂರ್ಣ ಸವಿವರವನ್ನು ವಿದ್ಯಾರ್ಥಿಗಳ ಮನಮುಟ್ಟುವಂತೆ ತಿಳಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೌಸರ್ ಪಲ್ಲಾದೆ ಇವರು ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಕಾರ್ಯವನ್ನು ನಿರ್ವಹಿಸಿದರು. ಹಾಗೆಯೇ ಪುಟಾಣಿ ಮಕ್ಕಳಿಂದ ಕಲರವಭರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.


ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಉಷಾ ಸ್ವಾಗತಿಸಿದರು, ಕೌಸರ್ ಪಲ್ಲಾದೆ ವಂದಿಸಿದರು. ಪಿಯುಸಿ ಉಪನ್ಯಾಸಕರಾದ ಹಂಸಶ್ರೀ ಬಿ.ಆರ್ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

Suddi Udaya

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya
error: Content is protected !!