22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಪುಂಜಾಲಕಟ್ಟೆ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ಯಾಮಪ್ರಸಾದ್ ಸಂಪಿಗೆತ್ತಾಯ ನೆರವೇರಿಸಿ ದೇಶದ ಅಸ್ಮಿತೆ ಕಾಪಾಡಿಕೊಳ್ಳಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಆ ಕಾರ್ಯವನ್ನು ಪ್ರತಿಯೊಬ್ಬರು ಕಾಯ ವಾಚ ಮಾನಸ ಮಾಡಿ, ಮಾತ್ರವಲ್ಲದೆ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪ್ರತಿಯೊಬ್ಬರೂ ಕೂಡ ಕರ್ತವ್ಯ ಪ್ರಜ್ಞೆಯನ್ನು ನೆನಪಿಟ್ಟುಕೊಂಡು ಮಾಡಬೇಕು ಎಂದು ಹೇಳಿದರು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ಸರೋಜಿನಿ ಆಚಾರ್ ಸಮಾರಂಭಕ್ಕೆ ಶುಭ ಹಾರೈಸಿದರು, ಉಪ ಪ್ರಾಂಶುಪಾಲರಾದ ಉದಯ್ ಕುಮಾರ್ ಬಿ ಇವರು ಸಂದರ್ಭೋಚಿತವಾಗಿ ಮಾತನಾಡಿದರು.

ಕಾರ್ಯಕ್ರಮವನ್ನು ಪ್ರೌಢಶಾಲಾ ಶಿಕ್ಷಕರಾದ ನಿರಂಜನ್ ಜೈನ್ ನಿರೂಪಿಸಿ, ಧರಣೇಂದ್ರ ಕೆ ಧನ್ಯವಾದ ಸಲ್ಲಿಸಿ ಸರ್ವ ಉಪನ್ಯಾಸಕರ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಬಂಧುಗಳ ಸಹಕಾರದೊಂದಿಗೆ ಸರ್ವ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಮಾದರಿ ಆಗಿ ನಡೆಯಿತು.

Related posts

ಪಿಯುಸಿ ಫಲಿತಾಂಶ: ಆಳ್ವಾಸ್‌ ಪಿ.ಯು ಕಾಲೇಜು ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಧರ್ಮಸ್ಥಳ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

Suddi Udaya

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!