25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಮರೋಡಿ : ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಜ.25ರಿಂದ ಪ್ರಾರಂಭಗೊಂಡು ಜ.29 ರವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಬಾಲಕೃಷ್ಣ ಪಾಂಗಾಣ್ಣಾಯರ ಹಾಗೂ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಪ್ರಸಾದ್ ರವರ ನೇತೃತ್ವದಲ್ಲಿ ನಡೆಯಲಿದೆ.

ಇಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ತೋರಣ ಮೂಹೂರ್ತ , ನವಕ ಪ್ರಧಾನ ಹೋಮ, ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ , ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಕ್ತರು ಶ್ರೀಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಕೊಡಂಗೆಗುತ್ತು,ಕಾರ್ಯದರ್ಶಿ ಜಯಂತ್ ಕೋಟ್ಯಾನ್,ಆಡಳಿತ ಮಂಡಳಿ ಸದಸ್ಯರಾದ ರತ್ನಾಕರ ಬುಣ್ಣನ್, ವಿಜಯ ಅರಿಗ, ಎಂ.ಎಸ್ ಪೂಜಾರಿ, ದಿವಾಕರ ಹೆಗ್ಡೆ, ವಿಜಯ್ ಕುಮಾರ್ ಬಂಗ, ಎಂ. ಅಣ್ಣಪ್ಪ ಹೆಗ್ಡೆ, ರಾಧಕೃಷ್ಣ ಹೆಗ್ಡೆ, ಸುಜಯ ಹೆಗ್ಡೆ, ಶ್ರೀಧರ ಆಚಾರ್ಯ, ಸುರೇಂದ್ರ ಪೂಜಾರಿ, ಶ್ರೀಧರ ಪೂಜಾರಿ ಹಾಗೂ ಭಕ್ತರು, ಊರವರು ಉಪಸ್ಥಿತರಿದ್ದರು.

ಇಂದು ರಾತ್ರಿ ದೊಡ್ಡ ರಂಗಪೂಜೆ, ನಂತರ ಬಲಿ ಉತ್ಸವ, ಮಹಾಪೂಜೆ, ನಿತ್ಯಬಲಿ, ವ್ಯಾಘ್ರ ಚಾಮುಂಡಿ ಸಹಿತ ರಕ್ತೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ ಹಾಗೂ ಕುಣಿತ ಭಜನಾ ಕಾರ್ಯಕ್ರಮ ನಡೆಯಲಿದೆ.

Related posts

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ಮತ್ತು ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya
error: Content is protected !!