23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಮರೋಡಿ : ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಜ.25ರಿಂದ ಪ್ರಾರಂಭಗೊಂಡು ಜ.29 ರವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಬಾಲಕೃಷ್ಣ ಪಾಂಗಾಣ್ಣಾಯರ ಹಾಗೂ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಪ್ರಸಾದ್ ರವರ ನೇತೃತ್ವದಲ್ಲಿ ನಡೆಯಲಿದೆ.

ಇಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ತೋರಣ ಮೂಹೂರ್ತ , ನವಕ ಪ್ರಧಾನ ಹೋಮ, ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ , ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಕ್ತರು ಶ್ರೀಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಕೊಡಂಗೆಗುತ್ತು,ಕಾರ್ಯದರ್ಶಿ ಜಯಂತ್ ಕೋಟ್ಯಾನ್,ಆಡಳಿತ ಮಂಡಳಿ ಸದಸ್ಯರಾದ ರತ್ನಾಕರ ಬುಣ್ಣನ್, ವಿಜಯ ಅರಿಗ, ಎಂ.ಎಸ್ ಪೂಜಾರಿ, ದಿವಾಕರ ಹೆಗ್ಡೆ, ವಿಜಯ್ ಕುಮಾರ್ ಬಂಗ, ಎಂ. ಅಣ್ಣಪ್ಪ ಹೆಗ್ಡೆ, ರಾಧಕೃಷ್ಣ ಹೆಗ್ಡೆ, ಸುಜಯ ಹೆಗ್ಡೆ, ಶ್ರೀಧರ ಆಚಾರ್ಯ, ಸುರೇಂದ್ರ ಪೂಜಾರಿ, ಶ್ರೀಧರ ಪೂಜಾರಿ ಹಾಗೂ ಭಕ್ತರು, ಊರವರು ಉಪಸ್ಥಿತರಿದ್ದರು.

ಇಂದು ರಾತ್ರಿ ದೊಡ್ಡ ರಂಗಪೂಜೆ, ನಂತರ ಬಲಿ ಉತ್ಸವ, ಮಹಾಪೂಜೆ, ನಿತ್ಯಬಲಿ, ವ್ಯಾಘ್ರ ಚಾಮುಂಡಿ ಸಹಿತ ರಕ್ತೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ ಹಾಗೂ ಕುಣಿತ ಭಜನಾ ಕಾರ್ಯಕ್ರಮ ನಡೆಯಲಿದೆ.

Related posts

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!