27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಲಾಯಿಲ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಲಾಯಿಲದಲ್ಲಿ 75ನೇ ಗಣರಾಜ್ಯೋತ್ಸವವನ್ನುಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಎಸ್.ಡಿ.ಎಮ್.ಸಿ, ನಾಮ ನಿರ್ದೇಶಕರು ಹಾಗೂ ಲಾಯಿಲ ಪಂಚಾಯತ್ ಸದಸ್ಯ ಪ್ರಸಾದ್ , ಮತ್ತು ಶಾಲಾ ಹಳೇ ವಿದ್ಯಾರ್ಥಿ ಶೇಖರ್ ಲಾಯಿಲ ಇವರು ಧ್ವಜಾರೋಹಣವನ್ನು ನೆರವೇರಿಸಿ, ಗಣರಾಜ್ಯೋತ್ಸವದ ಮಹತ್ವ ಮತ್ತು ಸಂವಿಧಾನದ ಬಗ್ಗೆ ಮಾಹಿತಿ ಕೊಟ್ಟರು.

ಹಳೆ ವಿದ್ಯಾರ್ಥಿಗಳಾದ ಅಚ್ಯುತ ಗೌಡ, ಮ್ಯಾಕ್ಸಿಂ, ಎಸ್.ಕೆಡಿ.ಆರ್.ಡಿಪಿ ಯೋಜನೆ ಸಂಯೋಜಕರಾದ ಶ್ರೀಮತಿ ಗೀತಾ ಮೇಡಂ, ಶಾಲಾ ಶಿಕ್ಷಕರು, ಅಡುಗೆ ಸಿಬ್ಬಂದಿಗಳು, ಊರವರು, ಹಾಗೂ ಮುದ್ದು ಪುಟಾಣಿಗಳು ಭಾಗವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿಎಸ್ ಯವರು ಸ್ವಾಗತಿಸಿದ್ದ ಕಾರ್ಯಕ್ರಮಕ್ಕೆ ಸಹ ಶಿಕ್ಷಕ ಯೋಗೀಶ್ ಕಾರ್ಯಕ್ರಮ ನಿರೂಪಣೆ ಮಾಡಿ, ಧನ್ಯವಾದವಿತ್ತರು.


ಕಾರ್ಯಕ್ರಮಕ್ಕೆ ಲಾಯಿಲ ನ್ಯಾಯವಾದಿ ನೋಟರಿ ಪಬ್ಲಿಕ್ ಹಾಗೂ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಸಮಿತಿ ( ಕೆ ಡಿ ಪಿ ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ಸಂತೋಷ್ ಕುಮಾರ್ ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು.

Related posts

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

Suddi Udaya

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!