ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಲಾಯಿಲ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಲಾಯಿಲದಲ್ಲಿ 75ನೇ ಗಣರಾಜ್ಯೋತ್ಸವವನ್ನುಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಎಸ್.ಡಿ.ಎಮ್.ಸಿ, ನಾಮ ನಿರ್ದೇಶಕರು ಹಾಗೂ ಲಾಯಿಲ ಪಂಚಾಯತ್ ಸದಸ್ಯ ಪ್ರಸಾದ್ , ಮತ್ತು ಶಾಲಾ ಹಳೇ ವಿದ್ಯಾರ್ಥಿ ಶೇಖರ್ ಲಾಯಿಲ ಇವರು ಧ್ವಜಾರೋಹಣವನ್ನು ನೆರವೇರಿಸಿ, ಗಣರಾಜ್ಯೋತ್ಸವದ ಮಹತ್ವ ಮತ್ತು ಸಂವಿಧಾನದ ಬಗ್ಗೆ ಮಾಹಿತಿ ಕೊಟ್ಟರು.

ಹಳೆ ವಿದ್ಯಾರ್ಥಿಗಳಾದ ಅಚ್ಯುತ ಗೌಡ, ಮ್ಯಾಕ್ಸಿಂ, ಎಸ್.ಕೆಡಿ.ಆರ್.ಡಿಪಿ ಯೋಜನೆ ಸಂಯೋಜಕರಾದ ಶ್ರೀಮತಿ ಗೀತಾ ಮೇಡಂ, ಶಾಲಾ ಶಿಕ್ಷಕರು, ಅಡುಗೆ ಸಿಬ್ಬಂದಿಗಳು, ಊರವರು, ಹಾಗೂ ಮುದ್ದು ಪುಟಾಣಿಗಳು ಭಾಗವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿಎಸ್ ಯವರು ಸ್ವಾಗತಿಸಿದ್ದ ಕಾರ್ಯಕ್ರಮಕ್ಕೆ ಸಹ ಶಿಕ್ಷಕ ಯೋಗೀಶ್ ಕಾರ್ಯಕ್ರಮ ನಿರೂಪಣೆ ಮಾಡಿ, ಧನ್ಯವಾದವಿತ್ತರು.


ಕಾರ್ಯಕ್ರಮಕ್ಕೆ ಲಾಯಿಲ ನ್ಯಾಯವಾದಿ ನೋಟರಿ ಪಬ್ಲಿಕ್ ಹಾಗೂ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಸಮಿತಿ ( ಕೆ ಡಿ ಪಿ ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ಸಂತೋಷ್ ಕುಮಾರ್ ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು.

Related posts

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya
error: Content is protected !!