25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

ಉರುವಾಲು :ಉರುವಾಲು ಗ್ರಾಮದ ಕಾರಿಂಜ ಬಾಕಿಮಾರಿನಲ್ಲಿ ವರ್ಷಂಪ್ರತಿಯಂತೆ ಗ್ರಾಮ ದೈವಗಳಿಗೆ ಹಾಗೂ ಪರಿವಾರ ನೇಮೋತ್ಸವವು ಜ.25, 26 ರಂದು ನಡೆಯಿತು.

ಜ.25ರಂದು ಪಿಲಿಚಾಮುಂಡಿ ದೈವಕ್ಕೆ ಪರ್ವಹಾಗೂ ತೋರಣ ಮುಹೂರ್ತ ಸಂಜೆ ಹೋಮ, ಸ್ಥಳ ಶುದ್ಧಿ, ಬಿಂಬ ಶುದ್ದಿ, ಕಲಶ ಶುದ್ದಿ ಚೆಂಡೆತ್ತಿಮಾರು ಗುತ್ತಿನಿಂದ ಭಂಡಾರ ಹೊರಡುವುದು, ರಾತ್ರಿ ಕಾರಿಂಜ ಬಾಕಿಮಾರಿನಲ್ಲಿ ಭಂಡಾರ- ಇಳಿಸುವುದು, ಪಿಲಿಚಾಮುಂಡಿ ಭಂಡಾರ ಇಳಿಸಿ ದೈವಗಳಿಗೆ ಪರ್ವ ಹಾಗೂ ರಾಜಂದೈವ ಕಲ್ಕುಡ, ಪಿಲಿಚಾಮುಂಡಿ ಇತರ ಪರಿವಾರ ದೈವಗಳಿಗೆ ಎಣ್ಣೆ ವೀಳ ಕೊಡುವುದು ಮತ್ತು ನೇಮ, ಪಲ್ಲಪೂಜೆ, ಅನ್ನಸಂತರ್ಪಣೆ, ಕಲ್ಕುಡ, ಕಲ್ಲುರ್ಟಿ ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

ಜ.26ರಂದು ಸಂಜೆ ಎಣ್ಮಣ್ಣಾಯ ದೈವದ ನೇಮಕ್ಕೆ ಎಣ್ಣೆ ವೀಳ್ಯ ಕೊಡುವುದು- ಅಂಕ-ಚೆಂಡು, ಎಣ್ಮಣ್ಣಾಯ ನೇಮೋತ್ಸವ, ರಾತ್ರಿ ಅನ್ನಸಂತರ್ಪಣೆ, ಪಂಜುರ್ಲಿ ದೈವದ ನೇಮಕ್ಕೆ ಎಣ್ಣೆ ವೀಳ್ಯ ಕೊಡುವುದು, ನೇಮ ಜರುಗಿತು.


ಜ.28ರಂದು ಬೆಳಿಗ್ಗೆ ಕುಡುಮದ ಪಂಜುರ್ಲಿ, ಕೊರಗಜ್ಜ, ಗುಳಿಗ ಹಾಗೂ ಮುಗೇರ ಕೋಲ (ಮುಗೇರರ ಬನದಲ್ಲಿ), ಸಂಜೆ ಮಹಮ್ಮಾಯಿಗೆ ಸೇವೆ ಹಾಗೂ ಮಾರಿ ಪೂಜೆ ನಡೆಯಲಿದೆ.

ಆಡಳಿತ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ನೇಮೋತ್ಸವ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು. ಹಾಗೂ ಉರುವಾಲು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!