30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

ಉರುವಾಲು: ಇಲ್ಲಿನ ಭಾರತೀ ವಿದ್ಯಾ ಸಂಸ್ಥೆ ಯಲ್ಲಿ ವಿಜೃಂಭಣೆಯಿಂದ ಗಣರಾಜ್ಯೋತ್ಸವ ವನ್ನೂ ಆಚರಿಸಲಾಯಿತು.ಶಾಲಾ ಸೇವಾ ಸಮಿತಿಯ ಅಧ್ಯಕ್ಷ ದಿವಾಕರ ಶಾಸ್ತ್ರಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಧ್ವಜರೋಹಣ ಬಳಿಕ ವಿದ್ಯಾರ್ಥಿಗಳು ಧ್ವಜ ಗೀತೆ, ರಾಷ್ಟ್ರಗೀತೆ ಹಾಡಿ ಕೊನೆಯಲ್ಲಿ ಪಥ ಸಂಚಲನ ನೆರವೇರಿಸಿದರು. ಈ ಸಂದರ್ಭದಲ್ಲಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಹಾಗೂ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಣ್ಣಪ್ಪ ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ಶಾಲಾ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ತಮ್ಮ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ ನೆರವೇರಿತು. ಪುರೋಹಿತರಾದ ವಿಷ್ಣು ಪ್ರದೀಪ್ ಇವರ ಮಾರ್ಗದರ್ಶನದಲ್ಲಿ ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಹೆತ್ತವರ ಪಾದ ಪೂಜೆ ಸಲ್ಲಿಸಿ ಅವರ ಆಶೀರ್ವಾದ ಪಡೆದರು. ನಂತರ ಶಾಲೆಯಲ್ಲಿ ಈ ಮೊದಲು ಶಿಕ್ಷಕಿ ಆಗಿ ಸೇವೆ ಸಲ್ಲಿಸಿದ ಶ್ರೀಮತಿ ಹರ್ಷಿತಾ ಗಿರೀಶ್ ಹಾಗೂ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಉಷಾ ತಿರುಮಲೇಶ್ವರ ಪ್ರಸನ್ನ ಇವರುಗಳಿಗೆ ಶಿಕ್ಷಕ ವೃಂದ ದವರಿಂದ ಮಡಿಲು ತುಂಬುವ ಶಾಸ್ತ್ರ ವನ್ನು ನೆರವೇರಿಸಲಾಯಿತು.

Related posts

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ನೆರಿಯ ಬಾಂಜಾರುವಿನಲ್ಲಿ “ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ದೇಜಮ್ಮ ನಿಧನ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya
error: Content is protected !!