April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ (ರಿ), ಗಂಡಿಬಾಗಿಲು ಇಲ್ಲಿ 75 ನೇ ಗಣರಾಜ್ಯೋತ್ಸವವನ್ನು ಜ.26 ರಂದು ಆಚರಿಸಲಾಯಿತು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್‌ರವರು ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ.ಬಿಆರ್.ಅಂಬೇಡ್ಕರ್‌ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದ್ದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.


ಸಿಯೋನ್ ಆಶ್ರಮದ ಎಲ್ಲಾ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ನಂತರ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು.. ಸಂಸ್ಥೆಯ ವ್ಯವಸ್ಥಾಪಕರಾದ ಶ್ರೀಮತಿ ಸಂಧ್ಯಾಸುಭಾಷ್‌ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
error: Content is protected !!