25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ (ರಿ), ಗಂಡಿಬಾಗಿಲು ಇಲ್ಲಿ 75 ನೇ ಗಣರಾಜ್ಯೋತ್ಸವವನ್ನು ಜ.26 ರಂದು ಆಚರಿಸಲಾಯಿತು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್‌ರವರು ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ.ಬಿಆರ್.ಅಂಬೇಡ್ಕರ್‌ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದ್ದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.


ಸಿಯೋನ್ ಆಶ್ರಮದ ಎಲ್ಲಾ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ನಂತರ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು.. ಸಂಸ್ಥೆಯ ವ್ಯವಸ್ಥಾಪಕರಾದ ಶ್ರೀಮತಿ ಸಂಧ್ಯಾಸುಭಾಷ್‌ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಯನಾಡು: ಶ್ರೀ ರಾಮ ಭಜನಾ ಮಂದಿರದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!