23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

ವೇಣೂರು: ಇಲ್ಲಿಯ ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ದ.ಕ ಜಿಲ್ಲಾ ಮತ್ತು ತಾಲೂಕು ಅಮೆಚೂರ್ ಕಬಡ್ಡಿ ಸಂಸ್ಥೆಯ ಸಹಭಾಗಿತ್ವದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಫೆ.10 ರಂದು ಗುಂಡೂರಿ ತುಂಬೆದಲೆಕ್ಕಿ ಶ್ರೀ ಸತ್ಯ ನಾರಾಯಣ ಭಜನಾ ಮಂದಿರದ ಸಮೀಪ ನಡೆಯಲಿದೆ.

ಕಾರ್ಯಕ್ರಮದಲ್ಲಿ ಗುಂಡೂರಿ ಗ್ರಾಮದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು, ಯುನಿರ್ವಸಿಟಿ ಗೋಲ್ಡ್ ಮೆಡಲಿಸ್ಟ್ ಕಬಡ್ಡಿ ಆಟಗಾರರಾದ ಸುಶಾಂತ್ ಶೆಟ್ಟಿ ಗರ್ಡಾಡಿ, ಪ್ರಜ್ವಲ್ ಶಿವಮೊಗ್ಗ , ಶಶಾಂಕ್ ಕುಮಾರ್ ಹಾಗೂ ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ ನಡೆಯಲಿದೆ.

ಸ್ಪರ್ಧೆಯ ಪ್ರವೇಶ ಶುಲ್ಕ ರೂ.500., ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ರೂ. 15000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ದ್ವಿತೀಯ 10000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ತೃತೀಯ ರೂ.5000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ಚತುರ್ಥ ರೂ.5000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ಹಾಗೂ ವೈಯಕ್ತಿಕ ಬಹುಮಾನ ಬೆಸ್ಟ್ ರೈಡರ್, ಬೆಸ್ಟ್ ಆಲ್ ರೌಂಡರ್, ಬೆಸ್ಟ್ ಕ್ಯಾಚರ್ ಸಿಗಲಿದೆ.

Related posts

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಇಂದಬೆಟ್ಟು: ಪಿಲಾಪ್ಪಾಡಿ ನಿವಾಸಿ ಕುಸುಮಾವತಿ ನಿಧನ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya
error: Content is protected !!