September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಬರೆದ ಭಾರತದ ಶ್ರೇಷ್ಠ ಸಂವಿಧಾನ ಯಥಾವತ್ತಾಗಿ ಜಾರಿಯಾಗುತ್ತಿದ್ದರೆ ಸ್ವಾತಂತ್ರ್ಯದ ನಂತರ ಕೇವಲ ಇಪ್ಪತ್ತು ವರ್ಷಗಳಲ್ಲಿ ಅನಕ್ಷರತೆ, ಬಡತನ, ದೌರ್ಜನ್ಯ, ಮೇಲುಕೀಳು ಅಸಮಾನತೆಗಳಿಲ್ಲದ ಪ್ರಬುದ್ಧ ಭಾರತ ನಿರ್ಮಾಣವಾಗುತ್ತಿತ್ತು, ಆದರೆ ಅದನ್ನು ಜಾರಿಗೊಳಿಸುವಲ್ಲಿ ಆಡಳಿತರೂಢರು ಎಡವಿದ ಪರಿಣಾಮ ಭಾರತ ಇಂದಿಗೂ ಈ ಸ್ಥಿತಿಯಲ್ಲಿದೆ. ದೇಶಕ್ಕೆ ಸ್ವಾತಂತ್ರ್ಯ ದೊರಕಿ 74ವರ್ಷ ಕಳೆದರೂ ಇಂದಿಗೂ ಅಸಮಾನತೆ, ದೌರ್ಜನ್ಯ, ಶೋಷಣೆಗಳು ನಿತ್ಯನಿರಂತರ ಈ ದೇಶದಲ್ಲಿ ನಡೆಯುತ್ತಿರುವುದು ದುರಂತವೇ ಸರಿ ಎಂದು ಪುತ್ತೂರು ಠಾಣೆಯ ಆರಕ್ಷಕರಾದ ವೆಂಕಪ್ಪ ಪಿ.ಎಸ್. ಅವರು ಖೇದವ್ಯಕ್ತಪಡಿಸಿದರು.
ಅವರು ಜ. 26ರಂದು ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಧರ್ಮಸ್ಥಳ ವಲಯ ಘಟಕ ಹಾಗೂ ಗಣರಾಜ್ಯೋತ್ಸವ ಆಚರಣಾ ಸಮಿತಿ ಅಶೋಕನಗರ ಧರ್ಮಸ್ಥಳ ಇವರ ಜಂಟಿ ಆಶ್ರಯದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ದಿಕ್ಸೂಚಿ ಭಾಷಣವನ್ನು ಮಾಡುತ್ತಿದ್ದರು.


ಆದಿದ್ರಾವಿಡ ಸಮಾಜ ಸೇವಾ ಸಂಘದ ವಲಯ ಘಟಕದ ಅಧ್ಯಕ್ಷ ಸುರೇಶ್‌ರವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿ, ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿಯವರು ಮಾತನಾಡಿ ಈ ದೇಶದಲ್ಲಿ ನಮಗೆ ಸಿಕ್ಕಿದ್ದೆಲ್ಲವೂ ಇನ್ನೂ ಸಿಗುವುದೇನಿದ್ದರೂ ಅದು ಸಂವಿಧಾನದಿಂದಲೇ ಹೊರತು ಬೇರೆ ಯಾವುದರಿಂದಲೂ ಅಲ್ಲ. ಅದಕ್ಕಾಗಿ ಸಂವಿಧಾನವನ್ನು ಉಳಿಸಲು ನಾವೆಲ್ಲರೂ ಸಂಘಟಿತರಾಗಬೇಕು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಚಿಂತನೆಯ ಮೇಲೆ ಆದಿದ್ರಾವಿಡ ಸಂಘಟನೆಯನ್ನು ತಾಲೂಕು ಹಾಗೂ ಜಿಲ್ಲೆಯಾದ್ಯಂತ ಸಂಘಟಿಸಬೇಕು ಎಂದು ಕರೆ ನೀಡಿದರು.


ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾರವರು ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿ ಶುಭಹಾರೈಸಿದರು. ಆದಿದ್ರಾವಿಡ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಅರ್ಬಿಗುಡ್ಡೆ ಸಂದರ್ಭೋಚಿತವಾಗಿ ಮಾತನಾಡಿದರು. ಗ್ರಾ.ಪಂ.ಸದಸ್ಯೆ ಶ್ರೀಮತಿ ಸುನೀತಾ, ಆದಿದ್ರಾವಿಡ ಸಮಾಜ ಸೇವಾ ಸಂಘದ ಬೆಳ್ತಂಗಡಿ ತಾಲೂಕು ಅಧ್ಯಕ್ಷ ದಿನೇಶ್ ಕೊಕ್ಕಡ, ಅಶೋಕನಗರದ ಗುರಿಕಾರರಾದ ಕರಿಯ ಹಾಗೂ ಸದಾಶಿವ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಲ್ಲದೆ ಕಾರ್ಯಕ್ರಮದ ಊಟದ ವ್ಯವಸ್ಥೆಯನ್ನು ಒದಗಿಸಿದ ಬಾಬು ಗುರುಸ್ವಾಮಿಯವರನ್ನು ಗೌರವಿಸಲಾಯಿತು. ಶಾಲಾ ಮಕ್ಕಳಿಗೆ ಏರ್ಪಡಿಸಲಾದ ವಿವಿಧ ಸ್ಫರ್ಧಾವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಶೇಖರ್ ವಿ.ಯವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ, ರಮೇಶ್ ಹೆಚ್.ಎಂ. ಅವಲೋಕನ ವರದಿಯನ್ನು ವಾಚಿಸಿದರು. ಸುಜಾತರವರು ಬಹುಮಾನಿತರ ಪಟ್ಟಿ ವಾಚಿಸಿದರು. ಸಂತೋಷ್ ಕಾರ್ಯಕ್ರಮ ನಿರೂಪಿಸಿ, ಕೊನೆಯಲ್ಲಿ ಕವಿತಾ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

Suddi Udaya
error: Content is protected !!