23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

ಉರುವಾಲು :ಉರುವಾಲು ಗ್ರಾಮದ ಕಾರಿಂಜ ಬಾಕಿಮಾರಿನಲ್ಲಿ ವರ್ಷಂಪ್ರತಿಯಂತೆ ಗ್ರಾಮ ದೈವಗಳಿಗೆ ಹಾಗೂ ಪರಿವಾರ ನೇಮೋತ್ಸವವು ಜ.25, 26 ರಂದು ನಡೆಯಿತು.

ಜ.25ರಂದು ಪಿಲಿಚಾಮುಂಡಿ ದೈವಕ್ಕೆ ಪರ್ವಹಾಗೂ ತೋರಣ ಮುಹೂರ್ತ ಸಂಜೆ ಹೋಮ, ಸ್ಥಳ ಶುದ್ಧಿ, ಬಿಂಬ ಶುದ್ದಿ, ಕಲಶ ಶುದ್ದಿ ಚೆಂಡೆತ್ತಿಮಾರು ಗುತ್ತಿನಿಂದ ಭಂಡಾರ ಹೊರಡುವುದು, ರಾತ್ರಿ ಕಾರಿಂಜ ಬಾಕಿಮಾರಿನಲ್ಲಿ ಭಂಡಾರ- ಇಳಿಸುವುದು, ಪಿಲಿಚಾಮುಂಡಿ ಭಂಡಾರ ಇಳಿಸಿ ದೈವಗಳಿಗೆ ಪರ್ವ ಹಾಗೂ ರಾಜಂದೈವ ಕಲ್ಕುಡ, ಪಿಲಿಚಾಮುಂಡಿ ಇತರ ಪರಿವಾರ ದೈವಗಳಿಗೆ ಎಣ್ಣೆ ವೀಳ ಕೊಡುವುದು ಮತ್ತು ನೇಮ, ಪಲ್ಲಪೂಜೆ, ಅನ್ನಸಂತರ್ಪಣೆ, ಕಲ್ಕುಡ, ಕಲ್ಲುರ್ಟಿ ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

ಜ.26ರಂದು ಸಂಜೆ ಎಣ್ಮಣ್ಣಾಯ ದೈವದ ನೇಮಕ್ಕೆ ಎಣ್ಣೆ ವೀಳ್ಯ ಕೊಡುವುದು- ಅಂಕ-ಚೆಂಡು, ಎಣ್ಮಣ್ಣಾಯ ನೇಮೋತ್ಸವ, ರಾತ್ರಿ ಅನ್ನಸಂತರ್ಪಣೆ, ಪಂಜುರ್ಲಿ ದೈವದ ನೇಮಕ್ಕೆ ಎಣ್ಣೆ ವೀಳ್ಯ ಕೊಡುವುದು, ನೇಮ ಜರುಗಿತು.


ಜ.28ರಂದು ಬೆಳಿಗ್ಗೆ ಕುಡುಮದ ಪಂಜುರ್ಲಿ, ಕೊರಗಜ್ಜ, ಗುಳಿಗ ಹಾಗೂ ಮುಗೇರ ಕೋಲ (ಮುಗೇರರ ಬನದಲ್ಲಿ), ಸಂಜೆ ಮಹಮ್ಮಾಯಿಗೆ ಸೇವೆ ಹಾಗೂ ಮಾರಿ ಪೂಜೆ ನಡೆಯಲಿದೆ.

ಆಡಳಿತ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ನೇಮೋತ್ಸವ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು. ಹಾಗೂ ಉರುವಾಲು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya
error: Content is protected !!