July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

ಉರುವಾಲು :ಉರುವಾಲು ಗ್ರಾಮದ ಕಾರಿಂಜ ಬಾಕಿಮಾರಿನಲ್ಲಿ ವರ್ಷಂಪ್ರತಿಯಂತೆ ಗ್ರಾಮ ದೈವಗಳಿಗೆ ಹಾಗೂ ಪರಿವಾರ ನೇಮೋತ್ಸವವು ಜ.25, 26 ರಂದು ನಡೆಯಿತು.

ಜ.25ರಂದು ಪಿಲಿಚಾಮುಂಡಿ ದೈವಕ್ಕೆ ಪರ್ವಹಾಗೂ ತೋರಣ ಮುಹೂರ್ತ ಸಂಜೆ ಹೋಮ, ಸ್ಥಳ ಶುದ್ಧಿ, ಬಿಂಬ ಶುದ್ದಿ, ಕಲಶ ಶುದ್ದಿ ಚೆಂಡೆತ್ತಿಮಾರು ಗುತ್ತಿನಿಂದ ಭಂಡಾರ ಹೊರಡುವುದು, ರಾತ್ರಿ ಕಾರಿಂಜ ಬಾಕಿಮಾರಿನಲ್ಲಿ ಭಂಡಾರ- ಇಳಿಸುವುದು, ಪಿಲಿಚಾಮುಂಡಿ ಭಂಡಾರ ಇಳಿಸಿ ದೈವಗಳಿಗೆ ಪರ್ವ ಹಾಗೂ ರಾಜಂದೈವ ಕಲ್ಕುಡ, ಪಿಲಿಚಾಮುಂಡಿ ಇತರ ಪರಿವಾರ ದೈವಗಳಿಗೆ ಎಣ್ಣೆ ವೀಳ ಕೊಡುವುದು ಮತ್ತು ನೇಮ, ಪಲ್ಲಪೂಜೆ, ಅನ್ನಸಂತರ್ಪಣೆ, ಕಲ್ಕುಡ, ಕಲ್ಲುರ್ಟಿ ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

ಜ.26ರಂದು ಸಂಜೆ ಎಣ್ಮಣ್ಣಾಯ ದೈವದ ನೇಮಕ್ಕೆ ಎಣ್ಣೆ ವೀಳ್ಯ ಕೊಡುವುದು- ಅಂಕ-ಚೆಂಡು, ಎಣ್ಮಣ್ಣಾಯ ನೇಮೋತ್ಸವ, ರಾತ್ರಿ ಅನ್ನಸಂತರ್ಪಣೆ, ಪಂಜುರ್ಲಿ ದೈವದ ನೇಮಕ್ಕೆ ಎಣ್ಣೆ ವೀಳ್ಯ ಕೊಡುವುದು, ನೇಮ ಜರುಗಿತು.


ಜ.28ರಂದು ಬೆಳಿಗ್ಗೆ ಕುಡುಮದ ಪಂಜುರ್ಲಿ, ಕೊರಗಜ್ಜ, ಗುಳಿಗ ಹಾಗೂ ಮುಗೇರ ಕೋಲ (ಮುಗೇರರ ಬನದಲ್ಲಿ), ಸಂಜೆ ಮಹಮ್ಮಾಯಿಗೆ ಸೇವೆ ಹಾಗೂ ಮಾರಿ ಪೂಜೆ ನಡೆಯಲಿದೆ.

ಆಡಳಿತ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ನೇಮೋತ್ಸವ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು. ಹಾಗೂ ಉರುವಾಲು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya
error: Content is protected !!