July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

ಉರುವಾಲು :ಉರುವಾಲು ಗ್ರಾಮದ ಕಾರಿಂಜ ಬಾಕಿಮಾರಿನಲ್ಲಿ ವರ್ಷಂಪ್ರತಿಯಂತೆ ಗ್ರಾಮ ದೈವಗಳಿಗೆ ಹಾಗೂ ಪರಿವಾರ ನೇಮೋತ್ಸವವು ಜ.25, 26 ರಂದು ನಡೆಯಿತು.

ಜ.25ರಂದು ಪಿಲಿಚಾಮುಂಡಿ ದೈವಕ್ಕೆ ಪರ್ವಹಾಗೂ ತೋರಣ ಮುಹೂರ್ತ ಸಂಜೆ ಹೋಮ, ಸ್ಥಳ ಶುದ್ಧಿ, ಬಿಂಬ ಶುದ್ದಿ, ಕಲಶ ಶುದ್ದಿ ಚೆಂಡೆತ್ತಿಮಾರು ಗುತ್ತಿನಿಂದ ಭಂಡಾರ ಹೊರಡುವುದು, ರಾತ್ರಿ ಕಾರಿಂಜ ಬಾಕಿಮಾರಿನಲ್ಲಿ ಭಂಡಾರ- ಇಳಿಸುವುದು, ಪಿಲಿಚಾಮುಂಡಿ ಭಂಡಾರ ಇಳಿಸಿ ದೈವಗಳಿಗೆ ಪರ್ವ ಹಾಗೂ ರಾಜಂದೈವ ಕಲ್ಕುಡ, ಪಿಲಿಚಾಮುಂಡಿ ಇತರ ಪರಿವಾರ ದೈವಗಳಿಗೆ ಎಣ್ಣೆ ವೀಳ ಕೊಡುವುದು ಮತ್ತು ನೇಮ, ಪಲ್ಲಪೂಜೆ, ಅನ್ನಸಂತರ್ಪಣೆ, ಕಲ್ಕುಡ, ಕಲ್ಲುರ್ಟಿ ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

ಜ.26ರಂದು ಸಂಜೆ ಎಣ್ಮಣ್ಣಾಯ ದೈವದ ನೇಮಕ್ಕೆ ಎಣ್ಣೆ ವೀಳ್ಯ ಕೊಡುವುದು- ಅಂಕ-ಚೆಂಡು, ಎಣ್ಮಣ್ಣಾಯ ನೇಮೋತ್ಸವ, ರಾತ್ರಿ ಅನ್ನಸಂತರ್ಪಣೆ, ಪಂಜುರ್ಲಿ ದೈವದ ನೇಮಕ್ಕೆ ಎಣ್ಣೆ ವೀಳ್ಯ ಕೊಡುವುದು, ನೇಮ ಜರುಗಿತು.


ಜ.28ರಂದು ಬೆಳಿಗ್ಗೆ ಕುಡುಮದ ಪಂಜುರ್ಲಿ, ಕೊರಗಜ್ಜ, ಗುಳಿಗ ಹಾಗೂ ಮುಗೇರ ಕೋಲ (ಮುಗೇರರ ಬನದಲ್ಲಿ), ಸಂಜೆ ಮಹಮ್ಮಾಯಿಗೆ ಸೇವೆ ಹಾಗೂ ಮಾರಿ ಪೂಜೆ ನಡೆಯಲಿದೆ.

ಆಡಳಿತ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ನೇಮೋತ್ಸವ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು. ಹಾಗೂ ಉರುವಾಲು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ (ಪ್ರೌಢಶಾಲಾ ವಿಭಾಗ) ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya
error: Content is protected !!