37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

ಉರುವಾಲು: ಇಲ್ಲಿನ ಭಾರತೀ ವಿದ್ಯಾ ಸಂಸ್ಥೆ ಯಲ್ಲಿ ವಿಜೃಂಭಣೆಯಿಂದ ಗಣರಾಜ್ಯೋತ್ಸವ ವನ್ನೂ ಆಚರಿಸಲಾಯಿತು.ಶಾಲಾ ಸೇವಾ ಸಮಿತಿಯ ಅಧ್ಯಕ್ಷ ದಿವಾಕರ ಶಾಸ್ತ್ರಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಧ್ವಜರೋಹಣ ಬಳಿಕ ವಿದ್ಯಾರ್ಥಿಗಳು ಧ್ವಜ ಗೀತೆ, ರಾಷ್ಟ್ರಗೀತೆ ಹಾಡಿ ಕೊನೆಯಲ್ಲಿ ಪಥ ಸಂಚಲನ ನೆರವೇರಿಸಿದರು. ಈ ಸಂದರ್ಭದಲ್ಲಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಹಾಗೂ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಣ್ಣಪ್ಪ ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ಶಾಲಾ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ತಮ್ಮ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ ನೆರವೇರಿತು. ಪುರೋಹಿತರಾದ ವಿಷ್ಣು ಪ್ರದೀಪ್ ಇವರ ಮಾರ್ಗದರ್ಶನದಲ್ಲಿ ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಹೆತ್ತವರ ಪಾದ ಪೂಜೆ ಸಲ್ಲಿಸಿ ಅವರ ಆಶೀರ್ವಾದ ಪಡೆದರು. ನಂತರ ಶಾಲೆಯಲ್ಲಿ ಈ ಮೊದಲು ಶಿಕ್ಷಕಿ ಆಗಿ ಸೇವೆ ಸಲ್ಲಿಸಿದ ಶ್ರೀಮತಿ ಹರ್ಷಿತಾ ಗಿರೀಶ್ ಹಾಗೂ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಉಷಾ ತಿರುಮಲೇಶ್ವರ ಪ್ರಸನ್ನ ಇವರುಗಳಿಗೆ ಶಿಕ್ಷಕ ವೃಂದ ದವರಿಂದ ಮಡಿಲು ತುಂಬುವ ಶಾಸ್ತ್ರ ವನ್ನು ನೆರವೇರಿಸಲಾಯಿತು.

Related posts

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya
error: Content is protected !!