ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ (ರಿ), ಗಂಡಿಬಾಗಿಲು ಇಲ್ಲಿ 75 ನೇ ಗಣರಾಜ್ಯೋತ್ಸವವನ್ನು ಜ.26 ರಂದು ಆಚರಿಸಲಾಯಿತು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್‌ರವರು ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ.ಬಿಆರ್.ಅಂಬೇಡ್ಕರ್‌ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದ್ದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.


ಸಿಯೋನ್ ಆಶ್ರಮದ ಎಲ್ಲಾ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ನಂತರ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು.. ಸಂಸ್ಥೆಯ ವ್ಯವಸ್ಥಾಪಕರಾದ ಶ್ರೀಮತಿ ಸಂಧ್ಯಾಸುಭಾಷ್‌ರವರು ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

Suddi Udaya
error: Content is protected !!