September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಶಾಲೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಟಿಕ್ಕಾ ಸಾಹೇಬ್ ರವರು ನೆರವೇರಿಸಿ ಮಾತನಾಡಿ ಗಣರಾಜ್ಯೋತ್ಸವ ಆಚರಣೆಯ ಮಹತ್ವ ಮತ್ತು ಹಿನ್ನೆಲೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿರಿಯ ಶಿಕ್ಷಕಿಯಾದ ಶ್ರೀಮತಿ ತೇಜಾವತಿಯವರು ವಹಿಸಿ ಮಾತನಾಡಿ ಪ್ರಜಾಪ್ರಭುತ್ವ ದಿನಕ್ಕಾಗಿ ಹೋರಾಟ ನಡೆಸಿದ ಮಹಾನ್ ನಾಯಕರ ಬಗ್ಗೆ ಗುಣಗಾನ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಪ್ರಜಾಪ್ರಭುತ್ವ ದಿನದ ಬಗ್ಗೆ ಭಾಷಣವನ್ನು ಏರ್ಪಡಿಸಲಾಯಿತು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲೆಯ ಎಲ್ಲಾ ಮಕ್ಕಳಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನ್ ಸೊಸೈಟಿ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು.
ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಶೀಲಾ ರವರು ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮಕ್ಕಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ನಿಶಾಂತ್ ರವರು ಸ್ವಾಗತಿಸಿ, ಶ್ರೀಮತಿ ವೇದಾವತಿ ಧನ್ಯವಾದಗೈದ ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕ ಪವನ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!