24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಬೆಳ್ತಂಗಡಿ: ಭಾರತದ ಸಂವಿಧಾನ ಪ್ರಪಂಚದ ಅತ್ಯಂತ ಶ್ರೇಷ್ಠ ಸಂವಿಧಾನಗಳಲ್ಲೊಂದು, ಸಂವಿಧಾನದ ಆಶಯಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನದತ್ತವಾಗಿ ನಮಗೆ ಒದಗಿ ಬಂದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಪ್ರಜೆಗಳಾದ ನಾವು ಅರಿತುಕೊಳ್ಳಬೇಕು ಮತ್ತು ಪಾಲಿಸಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಕರೆ ನೀಡಿದರು.

ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶವನ್ನು ನೀಡಿದರು. ಇದೇ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಲಾಯಿತು.


ಸಮಾರಂಭದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಮತ್ತು ವಾಣಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು. ವಾಣಿ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಣ್ಯರನ್ನು ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ್ ಕೆ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುಹಾಸಿನಿ ಧನ್ಯವಾದವಿತ್ತರು. ಸಹಶಿಕ್ಷಕೆ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya
error: Content is protected !!