25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

ಬೆಳ್ತಂಗಡಿ : ‘ಆಧ್ಯಾತ್ಮಿಕತೆ ನಮ್ಮ ದೇಶದ ಆತ್ಮ. ಆಧ್ಯಾತ್ಮಿಕವಾಗಿ ಜೀವನಕ್ಕೆ ಮಾರ್ಗದರ್ಶನ ನೀಡುವ ಆದರ್ಶಗಳ ಪುಣ್ಯಭೂಮಿ ಈ ಭಾರತ. ಹಾಗಾಗಿ ನಮಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಮೇಲೆ ಅಭಿಮಾನವಿರಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು.

ಅವರು ಜ.26 ರಂದು ರಾತ್ರಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, ‘ ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಾದ ತಿಂಗಳಲ್ಲೇ ನಾಳ ದೇವಸ್ಥಾನಕ್ಕೆ ಚಂದ್ರಮಂಡಲ ರಥ ಸಮರ್ಪಣೆಯಾಗಿದ್ದು ಭವ್ಯ ಕ್ಷಣವಾಗಿದೆ. ದೇವಸ್ಥಾನಕ್ಕೆ ಬರುವಾಗ ಚಪ್ಪಲಿ ಹೊರಗಿಟ್ಟು ಬರುವಂತೆ ಮನಸ್ಸಿನಿಂದ ರಾಜಕೀಯವನ್ನು ಹೊರಗಿಟ್ಟು ಸ್ವಚ್ಛವಾಗಿ ಬರಬೇಕು ಎಂದರು.


ಸಭೆಯನ್ನು ಉದ್ದೇಶಿಸಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮೈಸೂರಿನ ಉದ್ಯಮಿ ಹೇಮಂತ್ ಕುಮಾರ್ ಗೇರುಕಟ್ಟೆ, ಬೆಂಗಳೂರಿನ ಉದ್ಯಮಿ ಕಿರಣ್ ಚಂದ್ರ ಹಲೇಜಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಗೇರುಕಟ್ಟೆ ಪ್ರಸ್ತಾವಿಸಿ, ಸ್ವಾಗತಿಸಿದರು.

ವೇದಿಕೆಯಲ್ಲಿ ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಕಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿವಾಕರ ಮೆದಿನ, ಕಳಿಯ ಪ್ಯಾಕ್ಸ್ ಅಧ್ಯಕ್ಷ ವಸಂತ ಮಜಲು, ಓಡೀಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಬದಿನಡೆ ಮಂಜಲಡ್ಡ ಪರಿವಾರ ದೈವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುವರ್ಣೇಂದ್ರ ಜೈನ್ ಕಳಿಯಬೀಡು, ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಭಜನಾ ಮಂಡಳಿ ಅಧ್ಯಕ್ಷ ಉಮೆಶ್ ಶೆಟ್ಟಿ ಸಂಬೊಳ್ಯ, ಮಾತೃ ಮಂಡಳಿ ಅಧ್ಯಕ್ಷೆ ರೀತಾ ಚಂದ್ರಶೇಖರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಎಂ. ಜನಾರ್ದನ ಪೂಜಾರಿ, ದಿನೇಶ್ ಗೌಡ ಕೆ ಕಲಾಯಿತೊಟ್ಟು, ಅಂಬಾ ಬಿ ಆಳ್ವಾ, ವಿಜಯ ಹೆಚ್ ಪ್ರಸಾದ್, ಉಮೇಶ್ ಕೆ ಕೇಲ್ದಡ್ಕ, ರಾಜೇಶ್ ಶೆಟ್ಟಿ ಅಡ್ಡಕೊಡಂಗೆ ಉಪಸ್ಥಿತರಿದ್ದರು.

ರಥ ನಿರ್ಮಾಣಕ್ಕೆ ಮರ ನೀಡಿದ ಆನಂದ ಶೆಟ್ಟಿ ಐಸಿರಿ, ಗಣಪತಿ ಭಟ್, ಅಂಬಿಕೆ, ಮೋಹನ್, ರಥದ ಕೆತ್ತನೆ ಕಾರ್ಯ ಮಾಡಿದ ಶಶಿಧರ ಬೆಳಾಲು, ವಸಂತ ಆಚಾರ್ಯ, ಸದಾಶಿವ ಹಾಗೂ ಅಯೋಧ್ಯೆಯ ರಾಮಲಲ್ಲಾ ಮೂರ್ತಿ ಕೆತ್ತನೆ ಕಾರ್ಯದಲ್ಲಿ ಪಾಲ್ಗೊಂಡ ಶಿಲ್ಪಿ ಸ್ಥಳೀಯ ನಿವಾಸಿ ಜಯಚಂದ್ರ ಆಚಾರ್ಯರನ್ನು ಗೌರವಿಸಲಾಯಿತು.

ಎಸ್.ಕೆ.ಡಿ.ಆರ್.ಡಿ.ಪಿ. ವತಿಯಿಂದ ಯೋಜನಾಧಿಕಾರಿ ಸುರೇಂದ್ರರವರು ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ರೂ.2.50 ಲಕ್ಷದ ಚೆಕ್ ಅನ್ನು ಹಸ್ತಾಂತರಿಸಿದರು.

ಸತೀಶ್ ಭಂಡಾರಿ ಪ್ರಾರ್ಥನೆ ನೆರವೇರಿಸಿದರು. ಉಪನ್ಯಾಸಕ, ಕಳಿಯ ಪ್ಯಾಕ್ಸ್ ನ ನಿರ್ದೇಶಕ ಕೇಶವ ಬಂಗೇರ ನಿರೂಪಿಸಿದರು. ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ ವಂದಿಸಿದರು.

Related posts

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರಿನ ಮಹಿಳೆ ನಾಪತ್ತೆ; ದೂರು ದಾಖಲು

Suddi Udaya
error: Content is protected !!