23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

ಉರುವಾಲು :ಉರುವಾಲು ಗ್ರಾಮದ ಕಾರಿಂಜ ಬಾಕಿಮಾರಿನಲ್ಲಿ ವರ್ಷಂಪ್ರತಿಯಂತೆ ಗ್ರಾಮ ದೈವಗಳಿಗೆ ಹಾಗೂ ಪರಿವಾರ ನೇಮೋತ್ಸವವು ಜ.25, 26 ರಂದು ನಡೆಯಿತು.

ಜ.25ರಂದು ಪಿಲಿಚಾಮುಂಡಿ ದೈವಕ್ಕೆ ಪರ್ವಹಾಗೂ ತೋರಣ ಮುಹೂರ್ತ ಸಂಜೆ ಹೋಮ, ಸ್ಥಳ ಶುದ್ಧಿ, ಬಿಂಬ ಶುದ್ದಿ, ಕಲಶ ಶುದ್ದಿ ಚೆಂಡೆತ್ತಿಮಾರು ಗುತ್ತಿನಿಂದ ಭಂಡಾರ ಹೊರಡುವುದು, ರಾತ್ರಿ ಕಾರಿಂಜ ಬಾಕಿಮಾರಿನಲ್ಲಿ ಭಂಡಾರ- ಇಳಿಸುವುದು, ಪಿಲಿಚಾಮುಂಡಿ ಭಂಡಾರ ಇಳಿಸಿ ದೈವಗಳಿಗೆ ಪರ್ವ ಹಾಗೂ ರಾಜಂದೈವ ಕಲ್ಕುಡ, ಪಿಲಿಚಾಮುಂಡಿ ಇತರ ಪರಿವಾರ ದೈವಗಳಿಗೆ ಎಣ್ಣೆ ವೀಳ ಕೊಡುವುದು ಮತ್ತು ನೇಮ, ಪಲ್ಲಪೂಜೆ, ಅನ್ನಸಂತರ್ಪಣೆ, ಕಲ್ಕುಡ, ಕಲ್ಲುರ್ಟಿ ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

ಜ.26ರಂದು ಸಂಜೆ ಎಣ್ಮಣ್ಣಾಯ ದೈವದ ನೇಮಕ್ಕೆ ಎಣ್ಣೆ ವೀಳ್ಯ ಕೊಡುವುದು- ಅಂಕ-ಚೆಂಡು, ಎಣ್ಮಣ್ಣಾಯ ನೇಮೋತ್ಸವ, ರಾತ್ರಿ ಅನ್ನಸಂತರ್ಪಣೆ, ಪಂಜುರ್ಲಿ ದೈವದ ನೇಮಕ್ಕೆ ಎಣ್ಣೆ ವೀಳ್ಯ ಕೊಡುವುದು, ನೇಮ ಜರುಗಿತು.


ಜ.28ರಂದು ಬೆಳಿಗ್ಗೆ ಕುಡುಮದ ಪಂಜುರ್ಲಿ, ಕೊರಗಜ್ಜ, ಗುಳಿಗ ಹಾಗೂ ಮುಗೇರ ಕೋಲ (ಮುಗೇರರ ಬನದಲ್ಲಿ), ಸಂಜೆ ಮಹಮ್ಮಾಯಿಗೆ ಸೇವೆ ಹಾಗೂ ಮಾರಿ ಪೂಜೆ ನಡೆಯಲಿದೆ.

ಆಡಳಿತ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ನೇಮೋತ್ಸವ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು. ಹಾಗೂ ಉರುವಾಲು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya
error: Content is protected !!