23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

ಉರುವಾಲು: ಇಲ್ಲಿನ ಭಾರತೀ ವಿದ್ಯಾ ಸಂಸ್ಥೆ ಯಲ್ಲಿ ವಿಜೃಂಭಣೆಯಿಂದ ಗಣರಾಜ್ಯೋತ್ಸವ ವನ್ನೂ ಆಚರಿಸಲಾಯಿತು.ಶಾಲಾ ಸೇವಾ ಸಮಿತಿಯ ಅಧ್ಯಕ್ಷ ದಿವಾಕರ ಶಾಸ್ತ್ರಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಧ್ವಜರೋಹಣ ಬಳಿಕ ವಿದ್ಯಾರ್ಥಿಗಳು ಧ್ವಜ ಗೀತೆ, ರಾಷ್ಟ್ರಗೀತೆ ಹಾಡಿ ಕೊನೆಯಲ್ಲಿ ಪಥ ಸಂಚಲನ ನೆರವೇರಿಸಿದರು. ಈ ಸಂದರ್ಭದಲ್ಲಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಹಾಗೂ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಣ್ಣಪ್ಪ ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ಶಾಲಾ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ತಮ್ಮ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ ನೆರವೇರಿತು. ಪುರೋಹಿತರಾದ ವಿಷ್ಣು ಪ್ರದೀಪ್ ಇವರ ಮಾರ್ಗದರ್ಶನದಲ್ಲಿ ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಹೆತ್ತವರ ಪಾದ ಪೂಜೆ ಸಲ್ಲಿಸಿ ಅವರ ಆಶೀರ್ವಾದ ಪಡೆದರು. ನಂತರ ಶಾಲೆಯಲ್ಲಿ ಈ ಮೊದಲು ಶಿಕ್ಷಕಿ ಆಗಿ ಸೇವೆ ಸಲ್ಲಿಸಿದ ಶ್ರೀಮತಿ ಹರ್ಷಿತಾ ಗಿರೀಶ್ ಹಾಗೂ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಉಷಾ ತಿರುಮಲೇಶ್ವರ ಪ್ರಸನ್ನ ಇವರುಗಳಿಗೆ ಶಿಕ್ಷಕ ವೃಂದ ದವರಿಂದ ಮಡಿಲು ತುಂಬುವ ಶಾಸ್ತ್ರ ವನ್ನು ನೆರವೇರಿಸಲಾಯಿತು.

Related posts

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!