ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ (ರಿ), ಗಂಡಿಬಾಗಿಲು ಇಲ್ಲಿ 75 ನೇ ಗಣರಾಜ್ಯೋತ್ಸವವನ್ನು ಜ.26 ರಂದು ಆಚರಿಸಲಾಯಿತು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್‌ರವರು ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ.ಬಿಆರ್.ಅಂಬೇಡ್ಕರ್‌ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದ್ದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.


ಸಿಯೋನ್ ಆಶ್ರಮದ ಎಲ್ಲಾ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ನಂತರ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು.. ಸಂಸ್ಥೆಯ ವ್ಯವಸ್ಥಾಪಕರಾದ ಶ್ರೀಮತಿ ಸಂಧ್ಯಾಸುಭಾಷ್‌ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya

ಅಶೋಕ್ ಜೈನ್ ರವರಿಗೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸನ್ಮಾನ

Suddi Udaya
error: Content is protected !!