September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

ವೇಣೂರು: ಇಲ್ಲಿಯ ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ದ.ಕ ಜಿಲ್ಲಾ ಮತ್ತು ತಾಲೂಕು ಅಮೆಚೂರ್ ಕಬಡ್ಡಿ ಸಂಸ್ಥೆಯ ಸಹಭಾಗಿತ್ವದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಫೆ.10 ರಂದು ಗುಂಡೂರಿ ತುಂಬೆದಲೆಕ್ಕಿ ಶ್ರೀ ಸತ್ಯ ನಾರಾಯಣ ಭಜನಾ ಮಂದಿರದ ಸಮೀಪ ನಡೆಯಲಿದೆ.

ಕಾರ್ಯಕ್ರಮದಲ್ಲಿ ಗುಂಡೂರಿ ಗ್ರಾಮದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು, ಯುನಿರ್ವಸಿಟಿ ಗೋಲ್ಡ್ ಮೆಡಲಿಸ್ಟ್ ಕಬಡ್ಡಿ ಆಟಗಾರರಾದ ಸುಶಾಂತ್ ಶೆಟ್ಟಿ ಗರ್ಡಾಡಿ, ಪ್ರಜ್ವಲ್ ಶಿವಮೊಗ್ಗ , ಶಶಾಂಕ್ ಕುಮಾರ್ ಹಾಗೂ ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ ನಡೆಯಲಿದೆ.

ಸ್ಪರ್ಧೆಯ ಪ್ರವೇಶ ಶುಲ್ಕ ರೂ.500., ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ರೂ. 15000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ದ್ವಿತೀಯ 10000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ತೃತೀಯ ರೂ.5000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ಚತುರ್ಥ ರೂ.5000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ಹಾಗೂ ವೈಯಕ್ತಿಕ ಬಹುಮಾನ ಬೆಸ್ಟ್ ರೈಡರ್, ಬೆಸ್ಟ್ ಆಲ್ ರೌಂಡರ್, ಬೆಸ್ಟ್ ಕ್ಯಾಚರ್ ಸಿಗಲಿದೆ.

Related posts

ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya

ಎ 28-ಮೇ1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ-ಶಾಸಕ ಹರೀಶ್ ಪೂಂಜರಿಂದ ಕಲಶ ಕೂಪನ್ ಬಿಡುಗಡೆ

Suddi Udaya

ಬರೆಂಗಾಯ ಸ.ಉ. ಹಿ. ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನೆ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!