23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

ಬೆಳ್ತಂಗಡಿ: ಡಿವೈಎಫ್ಐ ರಾಜ್ಯ ಸಮ್ಮೇಳನದ ಅಂಗವಾಗಿ ಹಾಗೂ ಗಣರಾಜ್ಯೋತ್ಸವ ಪ್ರಯುಕ್ತ ಡಿವೈಎಫ್ಐ ಬೆಳ್ತಂಗಡಿ ತಾಲೂಕು ಸಮಿತಿ ಹಾಗೂ ಶ್ರೀ ಗುರುದೇವ ಪಿಯು ಕಾಲೇಜು ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಶ್ರೀಗುರುದೇವ ಪಿಯು ಕಾಲೇಜಿನಲ್ಲಿ ಪಾಳೆಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ಎಂಬ ಕುರಿತು ವಿಚಾರ ಸಂಕಿರಣ ನಡೆಯಿತು.


ಸಭೆಯ ಅದ್ಯಕ್ಷತೆ ಹಿರಿಯ ವಕೀಲರು, ಕಾರ್ಮಿಕ ನಾಯಕರು ಬಿ.ಎಂ.ಭಟ್ ವಹಿಸಿದ್ದರು. ಉದ್ಘಾಟನೆಯನ್ನು ಬೆಳ್ತಂಗಡಿಯ ಮಾಜಿ ಶಾಸಕ ಕೆ .ವಸಂತ ಬಂಗೇರ ಅವರ ಅನುಪಸ್ಥಿತಿಯಲ್ಲಿ ಕಾಲೇಜು ಪ್ರಾಂಶುಪಾಲರು ಸುಕೇಶ್ ಕುಮಾರ್ ಅವರು ನೆರವೇರಿಸಿದರು. ವಿಚಾರ ಮಂಡನೆಯನ್ನು ಹಿರಿಯ ವಕೀಲರು, ಚಿಂತಕರೂ ಆದ ಸುದೀರ್ ಕುಮಾರ್ ಕೊಪ್ಪ, ಮತ್ತು ಸಮಾಜ ಚಿಂತಕರು ಡಿ.ವೈ.ಎಫ್.ಐ. ರಾಜ್ಯ ಅಧ್ಯಕ್ಷ ಮುನೀರ್‌ ಕಾಟಿಪಳ್ಳ ನೆರವೇರಿಸಿದರು., ಪತ್ರಕರ್ತ ವಿಠಲ ಮಲೆಕುಡಿಯ, ಮತ್ತು ಎಸ್.ಎಫ್.ಐ ಬೆಳ್ತಂಗಡಿ ತಾಲೂಕು ಅಧ್ಯಕ್ಷ ವಿನುಶ ರಮಣ ಪ್ರತಿಕ್ರಿಯೆ ಮಿಡಿದರು.

ಮನೊಹರ ಕುಮಾರ್ ಇಳಂತಿಲ ವಕೀಲರು, ಸ್ವಾಗತಿಸಿದರು. ಉಪ ಪ್ರಾಂಶುಪಾಲ ಧನ್ಯವಾದವಿತ್ತರು. ಸಭೆಯ ಬಳಿಕ ಪ್ರಶ್ನೋತ್ತರ ನಡೆಯಿತು. ಸಭೆಯ ಪ್ರಾರಂಭದಲ್ಲಿ ಈಶ್ವರಿ, ಜಯಶ್ರಿ, ಅಭಿಶೇಕ್, ಶ್ಯಾಮರಾಜ್ ತಂಡ ಸಂವಿಧಾನ ಸದಾಶಯ ಹಾಡು ಹಾಡಿದರು.

Related posts

ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಸಮಾರೋಪ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya
error: Content is protected !!