25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

ಬೆಳ್ತಂಗಡಿ: : ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೊಕ್ರಾಡಿ ಸರ್ಕಾರಿ ಪ್ರೌಢಶಾಲಾ ನೂತನ ಕಟ್ಟಡ ನಿರ್ಮಾಣಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ತಲಾ ₹ 2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಆಯನ ಮತ್ತು ಸಿರಿಗಳ ಜಾತ್ರೋತ್ಸವದ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ದಯಾನಂದ ಪೂಜಾರಿ ಹಸ್ತಾಂತರಿಸಿದರು.

ಕೂಕ್ರಬೆಟ್ಟು ಶಾಲೆಯ ಮಂಜೂರಾದ ಪತ್ರವನ್ನು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್‌, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಯಶೋಧರ ಬಂಗೇರ, ಶಾಲಾ ಮುಖ್ಯ ಶಿಕ್ಷಕಿ ಸುಫಲಾ, ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಕೋಶಾಧಿಕಾರಿ ಅಶೋಕ್‌ ಕೋಟ್ಯಾನ್‌ ಸ್ವೀಕರಿಸಿದರು.

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯ ಮಂಜೂರಾತಿ ಪತ್ರವನ್ನು ಶಾಲಾ ಅಭಿವೃದ್ಧಿ (ಬೆಟರ್‌ಮೆಂಟ್‌) ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಶಾಲಾ ಮುಖ್ಯಶಿಕ್ಷಕ ಕೃಷ್ಣ ಭಟ್‌, ಎಸ್‌ಡಿಎಂಸಿ ಉಪಾಧ್ಯಕ್ಷ ಮೋಹನ ಅಂಡಿಂಜೆ ಸ್ವೀಕರಿಸಿದರು.

ಚಿತ್ರ: ಗಣೇಶ್‌ ಹೆಗ್ಡೆ ನಾರಾವಿ

Related posts

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya
error: Content is protected !!