25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

ಬೆಳ್ತಂಗಡಿ: : ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೊಕ್ರಾಡಿ ಸರ್ಕಾರಿ ಪ್ರೌಢಶಾಲಾ ನೂತನ ಕಟ್ಟಡ ನಿರ್ಮಾಣಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ತಲಾ ₹ 2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಆಯನ ಮತ್ತು ಸಿರಿಗಳ ಜಾತ್ರೋತ್ಸವದ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ದಯಾನಂದ ಪೂಜಾರಿ ಹಸ್ತಾಂತರಿಸಿದರು.

ಕೂಕ್ರಬೆಟ್ಟು ಶಾಲೆಯ ಮಂಜೂರಾದ ಪತ್ರವನ್ನು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್‌, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಯಶೋಧರ ಬಂಗೇರ, ಶಾಲಾ ಮುಖ್ಯ ಶಿಕ್ಷಕಿ ಸುಫಲಾ, ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಕೋಶಾಧಿಕಾರಿ ಅಶೋಕ್‌ ಕೋಟ್ಯಾನ್‌ ಸ್ವೀಕರಿಸಿದರು.

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯ ಮಂಜೂರಾತಿ ಪತ್ರವನ್ನು ಶಾಲಾ ಅಭಿವೃದ್ಧಿ (ಬೆಟರ್‌ಮೆಂಟ್‌) ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಶಾಲಾ ಮುಖ್ಯಶಿಕ್ಷಕ ಕೃಷ್ಣ ಭಟ್‌, ಎಸ್‌ಡಿಎಂಸಿ ಉಪಾಧ್ಯಕ್ಷ ಮೋಹನ ಅಂಡಿಂಜೆ ಸ್ವೀಕರಿಸಿದರು.

ಚಿತ್ರ: ಗಣೇಶ್‌ ಹೆಗ್ಡೆ ನಾರಾವಿ

Related posts

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!