25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

ಬೆಳಾಲು: ಕೊಲ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯ ವತಿಯಿಂದ ಕಳೆದ ಸಪ್ಟಂಬರ ತಿಂಗಳಲ್ಲಿ ಆರಂಭಗೊಂಡ ಭಗವದ್ಗೀತೆಯ ತರಗತಿಯು, ಹದಿನಂಟು ತರಗತಿಗಳನ್ನು ಪೂರೈಸುವುದರೊಂದಿಗೆ ಮುಕ್ತಾಯಗೊಂಡಿತು.

ಕೊಲ್ಪಾಡಿ ಭಜನಾ ಮಂಡಳಿಯವರು ಪ್ರತೀ ಶನಿವಾರ ವಾರದ ಭಜನಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದು, ಈ ಸಂದರ್ಭದಲ್ಲಿ ಸೇರುವ ಭಜಕರಿಗೆ ಭಗವದ್ಗೀತೆಯ ವಿಶೇಷ ತರಗತಿಯನ್ನು ಆಯೋಜಿಸಲಾಗಿತ್ತು.

ಭಗವದ್ಗೀತೆಯ ತರಗತಿಯನ್ನು ನಿರಂತರವಾಗಿ ಹಾಗೂ ಸಮರ್ಥ ಗುರುಗಳಾಗಿ ನಡೆಸಿಕೊಟ್ಟವರು ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು. ಪ್ರತೀ ತರಗತಿಯಲ್ಲಿ ಒಂದು ಅಧ್ಯಾಯದ ಆಯ್ದ ಶ್ಲೋಕಗಳ ವಾಚನದ ಅಭ್ಯಾಸ ಹಾಗೂ ಸೂಕ್ಷ್ಮವಾಗಿ ಅರ್ಥ ವಿವರಣೆ. ಜೊತೆಗೆ ಪ್ರಧಾನವಾಗಿ ಮಹಾಭಾರತದ ಮತ್ತು ರಾಮಾಯಣದ ಕಥೆಗಳನ್ನು ಹೇಳಿಕೊಡಲಾಗುತ್ತಿತ್ತು. ಗುರುಗಳ ಸಮರ್ಥ ನಿರ್ವಹಣೆ, ಆಕರ್ಷಕ ವಿವರಣೆ, ಚಿಕ್ಕ ಮಕ್ಕಳಿಗೂ ಅರ್ಥ ಆಗುವ ಭಾಷೆ ಮತ್ತು ಪದ ಪ್ರಯೋಗ ತರಗತಿಯನ್ಧು ಅರ್ಥಪೂರ್ಣವಾಗಿಸಿತು.

ಈ ತರಗತಿಯ ಮೂಲಕ ಭಾರತದ ಸಂಸ್ಕೃತಿಯ, ಜೀವನ ಮೌಲ್ಯಗಳ ಪರಿಚಯ ಮತ್ತು ಪ್ರಸಾರದ ಕಾರ್ಯವನ್ನು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯವರು ಶ್ರದ್ಧಾ ಭಕ್ತಿಯಿಂದ ನಡೆಸಿಕೊಟ್ಟಿದ್ದಾರೆ. ಮಂಡಳಿಯ ಅಧ್ಯಕ್ಷರಾದ ಸದಾಶಿವ ಮೈರಾಜೆ ಮತ್ತು ಸದಸ್ಯರೆಲ್ಲರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya
error: Content is protected !!