July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

ಬೆಳಾಲು: ಕೊಲ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯ ವತಿಯಿಂದ ಕಳೆದ ಸಪ್ಟಂಬರ ತಿಂಗಳಲ್ಲಿ ಆರಂಭಗೊಂಡ ಭಗವದ್ಗೀತೆಯ ತರಗತಿಯು, ಹದಿನಂಟು ತರಗತಿಗಳನ್ನು ಪೂರೈಸುವುದರೊಂದಿಗೆ ಮುಕ್ತಾಯಗೊಂಡಿತು.

ಕೊಲ್ಪಾಡಿ ಭಜನಾ ಮಂಡಳಿಯವರು ಪ್ರತೀ ಶನಿವಾರ ವಾರದ ಭಜನಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದು, ಈ ಸಂದರ್ಭದಲ್ಲಿ ಸೇರುವ ಭಜಕರಿಗೆ ಭಗವದ್ಗೀತೆಯ ವಿಶೇಷ ತರಗತಿಯನ್ನು ಆಯೋಜಿಸಲಾಗಿತ್ತು.

ಭಗವದ್ಗೀತೆಯ ತರಗತಿಯನ್ನು ನಿರಂತರವಾಗಿ ಹಾಗೂ ಸಮರ್ಥ ಗುರುಗಳಾಗಿ ನಡೆಸಿಕೊಟ್ಟವರು ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು. ಪ್ರತೀ ತರಗತಿಯಲ್ಲಿ ಒಂದು ಅಧ್ಯಾಯದ ಆಯ್ದ ಶ್ಲೋಕಗಳ ವಾಚನದ ಅಭ್ಯಾಸ ಹಾಗೂ ಸೂಕ್ಷ್ಮವಾಗಿ ಅರ್ಥ ವಿವರಣೆ. ಜೊತೆಗೆ ಪ್ರಧಾನವಾಗಿ ಮಹಾಭಾರತದ ಮತ್ತು ರಾಮಾಯಣದ ಕಥೆಗಳನ್ನು ಹೇಳಿಕೊಡಲಾಗುತ್ತಿತ್ತು. ಗುರುಗಳ ಸಮರ್ಥ ನಿರ್ವಹಣೆ, ಆಕರ್ಷಕ ವಿವರಣೆ, ಚಿಕ್ಕ ಮಕ್ಕಳಿಗೂ ಅರ್ಥ ಆಗುವ ಭಾಷೆ ಮತ್ತು ಪದ ಪ್ರಯೋಗ ತರಗತಿಯನ್ಧು ಅರ್ಥಪೂರ್ಣವಾಗಿಸಿತು.

ಈ ತರಗತಿಯ ಮೂಲಕ ಭಾರತದ ಸಂಸ್ಕೃತಿಯ, ಜೀವನ ಮೌಲ್ಯಗಳ ಪರಿಚಯ ಮತ್ತು ಪ್ರಸಾರದ ಕಾರ್ಯವನ್ನು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯವರು ಶ್ರದ್ಧಾ ಭಕ್ತಿಯಿಂದ ನಡೆಸಿಕೊಟ್ಟಿದ್ದಾರೆ. ಮಂಡಳಿಯ ಅಧ್ಯಕ್ಷರಾದ ಸದಾಶಿವ ಮೈರಾಜೆ ಮತ್ತು ಸದಸ್ಯರೆಲ್ಲರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya
error: Content is protected !!