22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

ಬೆಳ್ತಂಗಡಿ:ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಹೊಸ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಜೆಸಿಯ ಮಿಷನ್, ದೃಷ್ಟಿಕೋನ ಮತ್ತು ಮೌಲ್ಯಗಳ ಬಗ್ಗೆ ಆಳವಾದ ಅರಿವನ್ನು ನೀಡುವುದರ ಜೊತೆಗೆ, ಸಂಸ್ಥೆಯ ರಚನೆ, ಆಡಳಿತ ಮತ್ತು ಒಳನೋಟಗಳ ಬಗ್ಗೆ ಸವಿವರವಾಗಿ ತರಬೇತಿಯನ್ನು
ಹೊಸ ಸದಸ್ಯರಿಗೆ ಸಮುದಾಯದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು, ನೆಟ್‌ವರ್ಕಿಂಗ್ ಅವಕಾಶಗಳು ಮತ್ತು ಸಮುದಾಯದ ಪ್ರಭಾವವನ್ನು ಉತ್ತೇಜಿಸುವ ಜೆಸಿಐಯ ಬದ್ಧತೆಯನ್ನು ಅನುಭವಿ ಜೆಸಿಐ ವಲಯ ತರಬೇತುದಾರರಾದ ಸುಧೀರ್ ಕೆ ಎನ್ ಮತ್ತು ಶಂಕರ್ ರಾವ್ ನಡೆಸಿಕೊಟ್ಟರು.

ಘಟಕದ ಅಧ್ಯಕ್ಷರು ರಂಜಿತ್ ಎಚ್‌ ಡಿ, ಬಳಂಜ ಅಧ್ಯಕ್ಷತೆಯನ್ನು ವಹಿಸಿದ್ದರು.

ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಕುಮಾರ್, ಕಾರ್ಯಕ್ರಮದ ನಿರ್ದೇಶಕ ಚಂದ್ರಹಾಸ ಬಳಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೇದಿಕೆಗೆ ಗಣ್ಯರನ್ನು ಪ್ರಮೋದ್ ಆಹ್ವಾನಿಸಿದರು ,ಜೆಸಿ ವಾಣಿಯನ್ನು ರಾಮಕೃಷ್ಣ ವಾಚಿಸಿದರು ತರಬೇತುದಾರರ ಪರಿಚಯವನ್ನು ನೂತನ ಸದಸ್ಯರುಗಳಾದ ಆದರ್ಶ್ ಬಳಂಜ ಮತ್ತು ರಂಜನ್ ಧರ್ಮಸ್ಥಳ ವಾಚಿಸಿದರು . ಘಟಕದ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ನೂತನ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಅನುದೀಪ್ ಜೈನ್ ಅವರು ಧನ್ಯವಾದ ಸಲ್ಲಿಸಿದರು.

Related posts

ಕೊಯ್ಯೂರಿನ ಮಹಿಳೆ ನಾಪತ್ತೆ; ದೂರು ದಾಖಲು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪಾರೆಂಕಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya
error: Content is protected !!