September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

ಬೆಳ್ತಂಗಡಿ:ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಹೊಸ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಜೆಸಿಯ ಮಿಷನ್, ದೃಷ್ಟಿಕೋನ ಮತ್ತು ಮೌಲ್ಯಗಳ ಬಗ್ಗೆ ಆಳವಾದ ಅರಿವನ್ನು ನೀಡುವುದರ ಜೊತೆಗೆ, ಸಂಸ್ಥೆಯ ರಚನೆ, ಆಡಳಿತ ಮತ್ತು ಒಳನೋಟಗಳ ಬಗ್ಗೆ ಸವಿವರವಾಗಿ ತರಬೇತಿಯನ್ನು
ಹೊಸ ಸದಸ್ಯರಿಗೆ ಸಮುದಾಯದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು, ನೆಟ್‌ವರ್ಕಿಂಗ್ ಅವಕಾಶಗಳು ಮತ್ತು ಸಮುದಾಯದ ಪ್ರಭಾವವನ್ನು ಉತ್ತೇಜಿಸುವ ಜೆಸಿಐಯ ಬದ್ಧತೆಯನ್ನು ಅನುಭವಿ ಜೆಸಿಐ ವಲಯ ತರಬೇತುದಾರರಾದ ಸುಧೀರ್ ಕೆ ಎನ್ ಮತ್ತು ಶಂಕರ್ ರಾವ್ ನಡೆಸಿಕೊಟ್ಟರು.

ಘಟಕದ ಅಧ್ಯಕ್ಷರು ರಂಜಿತ್ ಎಚ್‌ ಡಿ, ಬಳಂಜ ಅಧ್ಯಕ್ಷತೆಯನ್ನು ವಹಿಸಿದ್ದರು.

ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಕುಮಾರ್, ಕಾರ್ಯಕ್ರಮದ ನಿರ್ದೇಶಕ ಚಂದ್ರಹಾಸ ಬಳಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೇದಿಕೆಗೆ ಗಣ್ಯರನ್ನು ಪ್ರಮೋದ್ ಆಹ್ವಾನಿಸಿದರು ,ಜೆಸಿ ವಾಣಿಯನ್ನು ರಾಮಕೃಷ್ಣ ವಾಚಿಸಿದರು ತರಬೇತುದಾರರ ಪರಿಚಯವನ್ನು ನೂತನ ಸದಸ್ಯರುಗಳಾದ ಆದರ್ಶ್ ಬಳಂಜ ಮತ್ತು ರಂಜನ್ ಧರ್ಮಸ್ಥಳ ವಾಚಿಸಿದರು . ಘಟಕದ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ನೂತನ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಅನುದೀಪ್ ಜೈನ್ ಅವರು ಧನ್ಯವಾದ ಸಲ್ಲಿಸಿದರು.

Related posts

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!