25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

ಬೆಳ್ತಂಗಡಿ:ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಹೊಸ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಜೆಸಿಯ ಮಿಷನ್, ದೃಷ್ಟಿಕೋನ ಮತ್ತು ಮೌಲ್ಯಗಳ ಬಗ್ಗೆ ಆಳವಾದ ಅರಿವನ್ನು ನೀಡುವುದರ ಜೊತೆಗೆ, ಸಂಸ್ಥೆಯ ರಚನೆ, ಆಡಳಿತ ಮತ್ತು ಒಳನೋಟಗಳ ಬಗ್ಗೆ ಸವಿವರವಾಗಿ ತರಬೇತಿಯನ್ನು
ಹೊಸ ಸದಸ್ಯರಿಗೆ ಸಮುದಾಯದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು, ನೆಟ್‌ವರ್ಕಿಂಗ್ ಅವಕಾಶಗಳು ಮತ್ತು ಸಮುದಾಯದ ಪ್ರಭಾವವನ್ನು ಉತ್ತೇಜಿಸುವ ಜೆಸಿಐಯ ಬದ್ಧತೆಯನ್ನು ಅನುಭವಿ ಜೆಸಿಐ ವಲಯ ತರಬೇತುದಾರರಾದ ಸುಧೀರ್ ಕೆ ಎನ್ ಮತ್ತು ಶಂಕರ್ ರಾವ್ ನಡೆಸಿಕೊಟ್ಟರು.

ಘಟಕದ ಅಧ್ಯಕ್ಷರು ರಂಜಿತ್ ಎಚ್‌ ಡಿ, ಬಳಂಜ ಅಧ್ಯಕ್ಷತೆಯನ್ನು ವಹಿಸಿದ್ದರು.

ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಕುಮಾರ್, ಕಾರ್ಯಕ್ರಮದ ನಿರ್ದೇಶಕ ಚಂದ್ರಹಾಸ ಬಳಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೇದಿಕೆಗೆ ಗಣ್ಯರನ್ನು ಪ್ರಮೋದ್ ಆಹ್ವಾನಿಸಿದರು ,ಜೆಸಿ ವಾಣಿಯನ್ನು ರಾಮಕೃಷ್ಣ ವಾಚಿಸಿದರು ತರಬೇತುದಾರರ ಪರಿಚಯವನ್ನು ನೂತನ ಸದಸ್ಯರುಗಳಾದ ಆದರ್ಶ್ ಬಳಂಜ ಮತ್ತು ರಂಜನ್ ಧರ್ಮಸ್ಥಳ ವಾಚಿಸಿದರು . ಘಟಕದ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ನೂತನ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಅನುದೀಪ್ ಜೈನ್ ಅವರು ಧನ್ಯವಾದ ಸಲ್ಲಿಸಿದರು.

Related posts

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya
error: Content is protected !!