July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

ಬೆಳ್ತಂಗಡಿ : ಕುಕ್ಕೇಡಿ ಪಟಾಕಿ ನಿರ್ಮಾಣ ಸ್ಥಳದಲ್ಲಿ ನಡೆದ ಸ್ಫೋಟ ಪ್ರಕರಣದ ಸ್ಥಳಕ್ಕೆ ಬೆಳ್ತಂಗಡಿ ಧರ್ಮಾ ಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿಸ್ಫೋಟದಿಂದ ಪೂರ್ಣ ಮತ್ತು ಅಂಶಿಕವಾಗಿ ಹಾನಿಗೊಳಗಾದ ಮನೆಗಳನ್ನು ಸಂದರ್ಶಸಿ ಮನೆಯವರಿಂದ ಘಟನೆಯ ನೇರ ಚಿತ್ರವನ್ನು ಪಡೆದರು.
ಸಾಮಾನ್ಯವಾಗಿ ಆ ಸಮಯದಲ್ಲಿ ಮನೆಯಲ್ಲಿ ಇರುವವರು ಪವಾಡ ಸದೃಶ್ಯವಾಗಿ ಅಂದು ಮನೆಯಲ್ಲಿ ಇಲ್ಲದ ಕಾರಣ ಜೀವಾಪಾಯದಿಂದ ಪಾರಾದರು ಎಂದು ಮನೆಯವರು ವಿವರಿಸಿದರು. ಒಂದು ಮನೆ ಸಂಪೂರ್ಣ ಹಾಗೂ ಇನ್ನೆರಡು ಮನೆಗಳು ಅಂಶಿಕವಾಗಿ ಹಾನಿಯಾಗಿದ್ದು ಸೂಕ್ತ ತನಿಖೆ ಮತ್ತು ಹಾನಿಗೊಳಗಾದವರಿಗೆ ಸೂಕ್ತ ಪರಿಹಾರಕ್ಕೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಗ್ರಹಿಸಿದರು.

ಧರ್ಮ ಪ್ರಾಂತ್ಯದ ವಿಕಾರ್ ಜೆನರಲ್ ಅತಿ ವಂದನಿಯ ಜೋಸ್ ವಲಿಯಪರಂಭಿಲ್, ಬೆಳ್ತಂಗಡಿ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಫೋರೋನ ಅಧ್ಯಕ್ಷರಾದ ರೆಜಿ ಜಾರ್ಜ್ ಪಡಂಗಡಿ ಹಾಗೂ ಬಿಜು ಬೆಳ್ತಂಗಡಿ ವೇಣೂರು ಧರ್ಮ ಕೇಂದ್ರದ ಸದಸ್ಯರು ಧರ್ಮಾ ಧ್ಯಕ್ಷರ ಉಪಸ್ಥಿತರಿದ್ದರು.

ವೆಂಕಪ್ಪ ಮೂಲ್ಯ, ಲೈಸ್ಸಿ ಚೆರಾಡಿ ಹಾಗೂ ಹಾನಿಗೊಳಗಾದ ಜೋಸೆಫ್ ಮಾತ್ಯು ಇವರ ಮನೆಗಳಿಗೆ ಭೇಟಿ ನೀಡಿ ಸಂತೈಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya
error: Content is protected !!