25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಅನುಮಾನಗಳು ಕಾಡುತ್ತಿವೆ, ಸ್ಫೋಟದ ತೀವ್ರತೆ ಎಷ್ಟಿತ್ತು ಎಂದರೆ ಕಾರ್ಮಿಕರ ದೇಹಗಳು ಚಿದ್ರ ಚಿದ್ರಾ ಗಳಾಗಿವೆ. ಹಾಗೂ ಅಲ್ಲಿ ಸ್ಫೋಟಗೊಂಡ ಕಟ್ಟಡ ಮತ್ತು ಕಟ್ಟಡದ ಹಿಂದೆ ಇರುವ ಕಲ್ಲಿನಿಂದ ನಿರ್ಮಿಸಿದ ಕಪೌಂಡ್ ಚಿದ್ರಾ ಚಿದ್ರಾಗೊಂಡಿದ್ದು ಮತ್ತು ಸುಮಾರು ಮೂರು ಕಿಲೋ ಮೀಟರ್ ವ್ಯಾಪ್ತಿಗೆ ಸ್ಫೋಟಕದ ಕಂಪನಗೊಂಡಿದ್ದು ಹಾಗೂ ಸ್ಫೋಟಕದ ತೀವ್ರತೆಗೆ ಸುಮಾರು ಹದಿನೈದಕ್ಕಿಂತ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು ಹಾನಿಗೊಳಗಾಗಿವೆ. ಹಾಗೂ ಸ್ಫೋಟಕದ ಶಬ್ದ ಹತ್ತು ಕಿಲೋ ಮೀಟರ್ ವರೆಗೆ ಕೇಳಿಸಿರುತ್ತದೆ. ಇದು ಕೇವಲ ಪಟಾಕಿಯಿಂದ ನಡೆದಿರಳು ಸಾಧ್ಯವಿಲ್ಲ ಇದರ ತೀವ್ರತೆಯನ್ನು ಗಮನಿಸಿದಾಗ ಗ್ರಾನೈಟ್ ಮಾದರಿಯ ಸ್ಫೋಟಕ ತಯಾರಾಗುತ್ತೀದೆ ಎಂದು ಅನುಮಾನ ಹುಟ್ಟಿಕೊಂಡಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಯೋಜಕ ನಿರಂಜನ್, ಜಯ ಪ್ರಸಾದ್, ಸಂತೋಷ್ ನಂದಿಬೆಟ್ಟ, ಗೋಪಾಲ್ ಶೆಟ್ಟಿ, ಧನಂಜಯ ಕುಲಾಲ್, ಜಗದೀಶ್ ಚಂದ್ರ, ಯಾದವ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya
error: Content is protected !!