26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಅನುಮಾನಗಳು ಕಾಡುತ್ತಿವೆ, ಸ್ಫೋಟದ ತೀವ್ರತೆ ಎಷ್ಟಿತ್ತು ಎಂದರೆ ಕಾರ್ಮಿಕರ ದೇಹಗಳು ಚಿದ್ರ ಚಿದ್ರಾ ಗಳಾಗಿವೆ. ಹಾಗೂ ಅಲ್ಲಿ ಸ್ಫೋಟಗೊಂಡ ಕಟ್ಟಡ ಮತ್ತು ಕಟ್ಟಡದ ಹಿಂದೆ ಇರುವ ಕಲ್ಲಿನಿಂದ ನಿರ್ಮಿಸಿದ ಕಪೌಂಡ್ ಚಿದ್ರಾ ಚಿದ್ರಾಗೊಂಡಿದ್ದು ಮತ್ತು ಸುಮಾರು ಮೂರು ಕಿಲೋ ಮೀಟರ್ ವ್ಯಾಪ್ತಿಗೆ ಸ್ಫೋಟಕದ ಕಂಪನಗೊಂಡಿದ್ದು ಹಾಗೂ ಸ್ಫೋಟಕದ ತೀವ್ರತೆಗೆ ಸುಮಾರು ಹದಿನೈದಕ್ಕಿಂತ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು ಹಾನಿಗೊಳಗಾಗಿವೆ. ಹಾಗೂ ಸ್ಫೋಟಕದ ಶಬ್ದ ಹತ್ತು ಕಿಲೋ ಮೀಟರ್ ವರೆಗೆ ಕೇಳಿಸಿರುತ್ತದೆ. ಇದು ಕೇವಲ ಪಟಾಕಿಯಿಂದ ನಡೆದಿರಳು ಸಾಧ್ಯವಿಲ್ಲ ಇದರ ತೀವ್ರತೆಯನ್ನು ಗಮನಿಸಿದಾಗ ಗ್ರಾನೈಟ್ ಮಾದರಿಯ ಸ್ಫೋಟಕ ತಯಾರಾಗುತ್ತೀದೆ ಎಂದು ಅನುಮಾನ ಹುಟ್ಟಿಕೊಂಡಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಯೋಜಕ ನಿರಂಜನ್, ಜಯ ಪ್ರಸಾದ್, ಸಂತೋಷ್ ನಂದಿಬೆಟ್ಟ, ಗೋಪಾಲ್ ಶೆಟ್ಟಿ, ಧನಂಜಯ ಕುಲಾಲ್, ಜಗದೀಶ್ ಚಂದ್ರ, ಯಾದವ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಆ್ಯಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಕುಂಭಶ್ರೀ ಪ.ಪೂ. ಕಾಲೇಜಿನಲ್ಲಿ ಸಂಕಲ್ಪ–2026: ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರಿದ ಪ್ರೇರಣಾದಾಯಕ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya
error: Content is protected !!