23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

ಬೆಳ್ತಂಗಡಿ : ವೇಣೂರು ಪಟಾಕಿ ತಯಾರಿಕೆ ಮಾಡುವ ವೇಳೆ ಸ್ಫೋಟಗೊಂಡ ಪ್ರಕರಣ ಸಂಬಂಧ ಪಟಾಕಿ ಮಾರಾಟ ಮತ್ತು ಗೋಡೌನ್ ಮಳಿಗೆಗಳಿಗೆ ತಾತ್ಕಾಲಿಕ ಪರವಾನಿಗೆ ಜ.29 ರಂದು ಜಿಲ್ಲಾಧಿಕಾರಿ ರದ್ದು ಮಾಡಿದ್ದಾರೆ. ಈ ಸಂಬಂಧ ಪಟಾಕಿ ಮಾರಾಟ ಮತ್ತು ದಾಸ್ತಾನು ಗೋಡೌನ್ ಮೇಲೆ ಜ.30 ರಂದು ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.ಬೆಳ್ತಂಗಡಿ ತಾಲೂಕಿನಲ್ಲಿ ಒಟ್ಟು 9 ಕಡೆ ಪಟಾಕಿ ಮಾರಾಟ ಮತ್ತು ದಾಸ್ತಾನು ಗೋಡೌನ್ ಇದ್ದು. ಬೆಳ್ತಂಗಡಿ ತಹಶೀಲ್ದಾರ್ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಜ.30 ರಂದು ಏಕಕಾಲದಲ್ಲಿ 7 ಸ್ಥಳಗಳಿಗೆ ದಾಳಿ ಮಾಡಿ ಪರಿಶೀಲನೆ ನಡೆಸಿ ಪಟಾಕಿ ಮಾರಾಟ ಮತ್ತು ದಾಸ್ತಾನು ಮಾಡದಂತೆ ಅಂಗಡಿಗೆ ನೋಟಿಸ್ ಅಂಟಿಸಿದ್ದಾರೆ.

ಮೂರು ಪಟಾಕಿ ದಾಸ್ತಾನು ಗೋಡೌನ್ ಸೀಝ್: ಉಜಿರೆ ಪ್ರಭಾತ್ ಸ್ಟೋರ್ ,ಬೆಳ್ತಂಗಡಿ ಮುಖ್ಯರಸ್ತೆ ಬೆಳ್ತಂಗಡಿ ಜನರಲ್ ಮರ್ಚೆಂಟ್ , ಚಾಮುಂಡೇಶ್ವರಿ ಎಂಟರ್ ಪ್ರೈಸಸ್ ಬೆಳ್ತಂಗಡಿ ಇದರ ಮೂರು ಗೋಡೌನ್ ನಲ್ಲಿ ಪಟಾಕಿ ದಾಸ್ತಾನು ಮಾಡಲಾಗಿದ್ದು ಇದನ್ನು ಕಂದಾಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಮುಂದಿನ ಸರಕಾರದ ಆದೇಶದವರೆಗೂ ಬೀಗ ಹಾಕಿದ್ದಾರೆ.

ದಾಳಿ ಮಾಡಲಾದ ಪಟಾಕಿ ಅಂಗಡಿಗಳು: ಬೆಳ್ತಂಗಡಿಯ ಎಸ್.ಪುಂಡಲೀಕ ಭಟ್ ಮಾಲೀಕತ್ವದ ಪ್ರಭಾತ್ ಸ್ಟೋರ್, ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿರುವ ಕೆ.ಮಂಜುನಾಥ್ ಕಾಮತ್ ಮಾಲೀಕತ್ವದ ಜನರಲ್ ಮರ್ಚೆಂಟ್, ಬೆಳ್ತಂಗಡಿಯ ಸುಧೀರ್ ಹೊಳ್ಳ ಮಾಲೀಕತ್ವದ ಚಾಮುಂಡೇಶ್ವರಿ ಎಂಟರ್ ಪ್ರೈಸಸ್ , ಉಜಿರೆಯ ಬಿ.ರಾಜರಾಮ್ ಭಟ್ ಮಾಲೀಕತ್ವದ ಮಂಜು ಶ್ರೀ ಸ್ಟೋರ್ , ಉಜಿರೆಯ ಪ್ರಭಾತ್ ಸ್ಟೋರ್, ಪುಂಜಾಲಕಟ್ಟೆಯ ಬಿ.ವಸಂತ ಬಾಳಿಗ ಮಾಲೀಕತ್ವದ ವಸಂತ್ ಸ್ಟೋರ್ , ವೇಣೂರಿನ ಬಿ.ಮೋಹನ್ ದಾಸ್ ನಾಯಕ್ ಸೇರಿದಂತೆ ಏಳು ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ರಿಜಿನಲ್ ಫೈರ್ ಅಫಿಸರ್ ರಂಗನಾಥ್ ಮತ್ತು ಸಿಬ್ಬಂದಿಗಳು ಮತ್ತು ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!