25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

ಮೊಗ್ರು : ಇಲ್ಲಿನ ಲಕ್ಷ್ಮಿ ನಾರಾಯಣ ಭಜನಾ ಮಂದಿರ (ರಿ), ಮತ್ತು ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಸಹಯೋಗದಲ್ಲಿ
ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ‘ಎಲ್.ಎನ್. ಟ್ರೋಫಿ-2024’ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ವಠಾರದಲ್ಲಿ ಜ28ರಂದು ನಡೆಯಿತು.

ಊಂತನಾಜೆ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಅಧ್ಯಕ್ಷ ಸಂಕಪ್ಪ ಗೌಡ ಉಪ್ಪ ರವರು ಪಂದ್ಯಾಟವನ್ನು ಉದ್ಘಾಟಿಸಿದರು.
ಸಂಜೆ ನೆರವೇರಿದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷ ದಿನೇಶ್ ಖಂಡಿಗ ವಹಿಸಿ ಮಾತನಾಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಪ್ರಭಾಕರ ಗೌಡ ಗುತ್ಯೋಡಿ, ಧರ್ಣಪ್ಪ ಗೌಡ ಅತ್ಯರಕಂಡ, ಬಾಬು ಬೆಲ್ಚಾಡ ಊಂತನಾಜೆ, ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಅಧ್ಯಕ್ಷ ಸಂಕಪ್ಪ ಗೌಡ , ಮಾಜಿ ಅಧ್ಯಕ್ಷ ಶಿವಣ್ಣ ಗೌಡ ಪರಪ್ಪಾದೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಅಚುಶ್ರೀ ಬಾಂಗೇರು ಹಾಗೂ ಬಂದಾರು ಗ್ರಾಮಪಂಚಾಯತ್ ಸದಸ್ಯೆ ಮಂಜುಶ್ರೀ ಊಂತನಾಜೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶುಭಹಾರೈಸಿದರು.

ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಅಧ್ಯಕ್ಷ ನಿತಿನ್ ಕುಮಾರ್ ಊಂತನಾಜೆ , ಕಾರ್ಯದರ್ಶಿ ವಿನಿತ್ ಕುಮಾರ್ ಊಂತನಾಜೆ, ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಕಾರ್ಯದರ್ಶಿ ಗಂಗಾಧರ ಗೌಡ ದಂಡುಗ ಉಪಸ್ಥಿತರಿದ್ದರು.

ಪ್ರವೀಣ್ ಕೊಯ್ಯೂರು ಹಾಗೂ ಕೇವನ್ ತೀರ್ಪುಗಾರರಾಗಿ ಪಂದ್ಯಾಟವನ್ನು ಮುನ್ನಡೆಸಿದರು. ಜಗದೀಶ್ ಬಾರಿಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

Suddi Udaya
error: Content is protected !!