July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

ಮೊಗ್ರು : ಇಲ್ಲಿನ ಲಕ್ಷ್ಮಿ ನಾರಾಯಣ ಭಜನಾ ಮಂದಿರ (ರಿ), ಮತ್ತು ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಸಹಯೋಗದಲ್ಲಿ
ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ‘ಎಲ್.ಎನ್. ಟ್ರೋಫಿ-2024’ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ವಠಾರದಲ್ಲಿ ಜ28ರಂದು ನಡೆಯಿತು.

ಊಂತನಾಜೆ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಅಧ್ಯಕ್ಷ ಸಂಕಪ್ಪ ಗೌಡ ಉಪ್ಪ ರವರು ಪಂದ್ಯಾಟವನ್ನು ಉದ್ಘಾಟಿಸಿದರು.
ಸಂಜೆ ನೆರವೇರಿದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷ ದಿನೇಶ್ ಖಂಡಿಗ ವಹಿಸಿ ಮಾತನಾಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಪ್ರಭಾಕರ ಗೌಡ ಗುತ್ಯೋಡಿ, ಧರ್ಣಪ್ಪ ಗೌಡ ಅತ್ಯರಕಂಡ, ಬಾಬು ಬೆಲ್ಚಾಡ ಊಂತನಾಜೆ, ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಅಧ್ಯಕ್ಷ ಸಂಕಪ್ಪ ಗೌಡ , ಮಾಜಿ ಅಧ್ಯಕ್ಷ ಶಿವಣ್ಣ ಗೌಡ ಪರಪ್ಪಾದೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಅಚುಶ್ರೀ ಬಾಂಗೇರು ಹಾಗೂ ಬಂದಾರು ಗ್ರಾಮಪಂಚಾಯತ್ ಸದಸ್ಯೆ ಮಂಜುಶ್ರೀ ಊಂತನಾಜೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶುಭಹಾರೈಸಿದರು.

ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಅಧ್ಯಕ್ಷ ನಿತಿನ್ ಕುಮಾರ್ ಊಂತನಾಜೆ , ಕಾರ್ಯದರ್ಶಿ ವಿನಿತ್ ಕುಮಾರ್ ಊಂತನಾಜೆ, ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಕಾರ್ಯದರ್ಶಿ ಗಂಗಾಧರ ಗೌಡ ದಂಡುಗ ಉಪಸ್ಥಿತರಿದ್ದರು.

ಪ್ರವೀಣ್ ಕೊಯ್ಯೂರು ಹಾಗೂ ಕೇವನ್ ತೀರ್ಪುಗಾರರಾಗಿ ಪಂದ್ಯಾಟವನ್ನು ಮುನ್ನಡೆಸಿದರು. ಜಗದೀಶ್ ಬಾರಿಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಧರ್ಮಸ್ಥಳ ಪ್ರಕರಣ : ಸ್ವಾಮೀಜಿಗಳ ನಿಯೋಗದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya
error: Content is protected !!