30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

ಮೊಗ್ರು : ಇಲ್ಲಿನ ಲಕ್ಷ್ಮಿ ನಾರಾಯಣ ಭಜನಾ ಮಂದಿರ (ರಿ), ಮತ್ತು ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಸಹಯೋಗದಲ್ಲಿ
ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ‘ಎಲ್.ಎನ್. ಟ್ರೋಫಿ-2024’ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ವಠಾರದಲ್ಲಿ ಜ28ರಂದು ನಡೆಯಿತು.

ಊಂತನಾಜೆ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಅಧ್ಯಕ್ಷ ಸಂಕಪ್ಪ ಗೌಡ ಉಪ್ಪ ರವರು ಪಂದ್ಯಾಟವನ್ನು ಉದ್ಘಾಟಿಸಿದರು.
ಸಂಜೆ ನೆರವೇರಿದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷ ದಿನೇಶ್ ಖಂಡಿಗ ವಹಿಸಿ ಮಾತನಾಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಪ್ರಭಾಕರ ಗೌಡ ಗುತ್ಯೋಡಿ, ಧರ್ಣಪ್ಪ ಗೌಡ ಅತ್ಯರಕಂಡ, ಬಾಬು ಬೆಲ್ಚಾಡ ಊಂತನಾಜೆ, ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಅಧ್ಯಕ್ಷ ಸಂಕಪ್ಪ ಗೌಡ , ಮಾಜಿ ಅಧ್ಯಕ್ಷ ಶಿವಣ್ಣ ಗೌಡ ಪರಪ್ಪಾದೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಅಚುಶ್ರೀ ಬಾಂಗೇರು ಹಾಗೂ ಬಂದಾರು ಗ್ರಾಮಪಂಚಾಯತ್ ಸದಸ್ಯೆ ಮಂಜುಶ್ರೀ ಊಂತನಾಜೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶುಭಹಾರೈಸಿದರು.

ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಅಧ್ಯಕ್ಷ ನಿತಿನ್ ಕುಮಾರ್ ಊಂತನಾಜೆ , ಕಾರ್ಯದರ್ಶಿ ವಿನಿತ್ ಕುಮಾರ್ ಊಂತನಾಜೆ, ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಕಾರ್ಯದರ್ಶಿ ಗಂಗಾಧರ ಗೌಡ ದಂಡುಗ ಉಪಸ್ಥಿತರಿದ್ದರು.

ಪ್ರವೀಣ್ ಕೊಯ್ಯೂರು ಹಾಗೂ ಕೇವನ್ ತೀರ್ಪುಗಾರರಾಗಿ ಪಂದ್ಯಾಟವನ್ನು ಮುನ್ನಡೆಸಿದರು. ಜಗದೀಶ್ ಬಾರಿಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಹೊಸ ಮೈಲಿಗಲ್ಲು

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya
error: Content is protected !!