September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

ಮೊಗ್ರು : ಇಲ್ಲಿನ ಲಕ್ಷ್ಮಿ ನಾರಾಯಣ ಭಜನಾ ಮಂದಿರ (ರಿ), ಮತ್ತು ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಸಹಯೋಗದಲ್ಲಿ
ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ‘ಎಲ್.ಎನ್. ಟ್ರೋಫಿ-2024’ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ವಠಾರದಲ್ಲಿ ಜ28ರಂದು ನಡೆಯಿತು.

ಊಂತನಾಜೆ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಅಧ್ಯಕ್ಷ ಸಂಕಪ್ಪ ಗೌಡ ಉಪ್ಪ ರವರು ಪಂದ್ಯಾಟವನ್ನು ಉದ್ಘಾಟಿಸಿದರು.
ಸಂಜೆ ನೆರವೇರಿದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷ ದಿನೇಶ್ ಖಂಡಿಗ ವಹಿಸಿ ಮಾತನಾಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಪ್ರಭಾಕರ ಗೌಡ ಗುತ್ಯೋಡಿ, ಧರ್ಣಪ್ಪ ಗೌಡ ಅತ್ಯರಕಂಡ, ಬಾಬು ಬೆಲ್ಚಾಡ ಊಂತನಾಜೆ, ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಅಧ್ಯಕ್ಷ ಸಂಕಪ್ಪ ಗೌಡ , ಮಾಜಿ ಅಧ್ಯಕ್ಷ ಶಿವಣ್ಣ ಗೌಡ ಪರಪ್ಪಾದೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಅಚುಶ್ರೀ ಬಾಂಗೇರು ಹಾಗೂ ಬಂದಾರು ಗ್ರಾಮಪಂಚಾಯತ್ ಸದಸ್ಯೆ ಮಂಜುಶ್ರೀ ಊಂತನಾಜೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶುಭಹಾರೈಸಿದರು.

ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಅಧ್ಯಕ್ಷ ನಿತಿನ್ ಕುಮಾರ್ ಊಂತನಾಜೆ , ಕಾರ್ಯದರ್ಶಿ ವಿನಿತ್ ಕುಮಾರ್ ಊಂತನಾಜೆ, ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಕಾರ್ಯದರ್ಶಿ ಗಂಗಾಧರ ಗೌಡ ದಂಡುಗ ಉಪಸ್ಥಿತರಿದ್ದರು.

ಪ್ರವೀಣ್ ಕೊಯ್ಯೂರು ಹಾಗೂ ಕೇವನ್ ತೀರ್ಪುಗಾರರಾಗಿ ಪಂದ್ಯಾಟವನ್ನು ಮುನ್ನಡೆಸಿದರು. ಜಗದೀಶ್ ಬಾರಿಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ- ಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭಿಷೇಕ: ಉಮಾಮಹೇಶ್ವರ ದೇವಸ್ಥಾನದಿಂದ ಪೊಸರಡ್ಕ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆ

Suddi Udaya
error: Content is protected !!