ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ ಗ್ರಾಮ ಸಮಿತಿಯ ಆಯೋಜನೆಯಲ್ಲಿ ಜ.28 ರಂದು ಬಸವನಗುಡಿ ಧರ್ಮ ಚಾವಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ ನಡೆಯಿತು.

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಅರ್ಬಿಗುಡ್ಡೆ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕ ಸುಕೇಶ್ ಕೆ ಹಾಗೂ ಪತ್ರಕರ್ತೆ ಕುಮಾರಿ ಯೋಗಿನಿ ಮಚ್ಚಿನ ಇವರು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ ಗ್ರಾಮ ಸಮಿತಿಯ ಅಧ್ಯಕ್ಷ ಆನಂದ ಹಟತೋಡಿ, ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷ ದಿನೇಶ್ ಕೆ ಕೊಕ್ಕಡ, ಕುಕ್ಕಳ ಗ್ರಾಮ ಸಮಿತಿಯ ಕಾರ್ಯದರ್ಶಿ ಕುಮಾರಿ ರಂಜಿನಿ ಮಂಜಲ್ಪಲೆ, ಉಪಕಾರ್ಯದರ್ಶಿ ಆನಂದ ಬೆರ್ಕಳ, ಗೌರವಾಧ್ಯಕ್ಷ ರಾಮ.ಕೆ., ಗಿರಿಯಪ್ಪ, ತುಕ್ರಪ್ಪ ಬೆರ್ಕಳ ಉಪಸ್ಥಿತರಿದ್ದರು.

20 ಕ್ಕೂ ಹೆಚ್ಚು ಮಕ್ಕಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಸಮಿತಿಯ ಜೊತೆ ಕಾರ್ಯದರ್ಶಿ ಶಿವಕುಮಾರ್ ಸ್ವಾಗತಿಸಿ, ಕುಕ್ಕಳ ಗ್ರಾಮ ಸಮಿತಿಯ ಕೋಶಾಧಿಕಾರಿ ನವೀನ್ ನಿರೂಪಿಸಿ, ಧನ್ಯವಾದವಿತ್ತರು.

Related posts

ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya
error: Content is protected !!