24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

ಬೆಳ್ತಂಗಡಿ : ಕುಕ್ಕೇಡಿ ಪಟಾಕಿ ನಿರ್ಮಾಣ ಸ್ಥಳದಲ್ಲಿ ನಡೆದ ಸ್ಫೋಟ ಪ್ರಕರಣದ ಸ್ಥಳಕ್ಕೆ ಬೆಳ್ತಂಗಡಿ ಧರ್ಮಾ ಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿಸ್ಫೋಟದಿಂದ ಪೂರ್ಣ ಮತ್ತು ಅಂಶಿಕವಾಗಿ ಹಾನಿಗೊಳಗಾದ ಮನೆಗಳನ್ನು ಸಂದರ್ಶಸಿ ಮನೆಯವರಿಂದ ಘಟನೆಯ ನೇರ ಚಿತ್ರವನ್ನು ಪಡೆದರು.
ಸಾಮಾನ್ಯವಾಗಿ ಆ ಸಮಯದಲ್ಲಿ ಮನೆಯಲ್ಲಿ ಇರುವವರು ಪವಾಡ ಸದೃಶ್ಯವಾಗಿ ಅಂದು ಮನೆಯಲ್ಲಿ ಇಲ್ಲದ ಕಾರಣ ಜೀವಾಪಾಯದಿಂದ ಪಾರಾದರು ಎಂದು ಮನೆಯವರು ವಿವರಿಸಿದರು. ಒಂದು ಮನೆ ಸಂಪೂರ್ಣ ಹಾಗೂ ಇನ್ನೆರಡು ಮನೆಗಳು ಅಂಶಿಕವಾಗಿ ಹಾನಿಯಾಗಿದ್ದು ಸೂಕ್ತ ತನಿಖೆ ಮತ್ತು ಹಾನಿಗೊಳಗಾದವರಿಗೆ ಸೂಕ್ತ ಪರಿಹಾರಕ್ಕೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಗ್ರಹಿಸಿದರು.

ಧರ್ಮ ಪ್ರಾಂತ್ಯದ ವಿಕಾರ್ ಜೆನರಲ್ ಅತಿ ವಂದನಿಯ ಜೋಸ್ ವಲಿಯಪರಂಭಿಲ್, ಬೆಳ್ತಂಗಡಿ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಫೋರೋನ ಅಧ್ಯಕ್ಷರಾದ ರೆಜಿ ಜಾರ್ಜ್ ಪಡಂಗಡಿ ಹಾಗೂ ಬಿಜು ಬೆಳ್ತಂಗಡಿ ವೇಣೂರು ಧರ್ಮ ಕೇಂದ್ರದ ಸದಸ್ಯರು ಧರ್ಮಾ ಧ್ಯಕ್ಷರ ಉಪಸ್ಥಿತರಿದ್ದರು.

ವೆಂಕಪ್ಪ ಮೂಲ್ಯ, ಲೈಸ್ಸಿ ಚೆರಾಡಿ ಹಾಗೂ ಹಾನಿಗೊಳಗಾದ ಜೋಸೆಫ್ ಮಾತ್ಯು ಇವರ ಮನೆಗಳಿಗೆ ಭೇಟಿ ನೀಡಿ ಸಂತೈಸಿದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya
error: Content is protected !!