September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

ಬೆಳ್ತಂಗಡಿ : ಕುಕ್ಕೇಡಿ ಪಟಾಕಿ ನಿರ್ಮಾಣ ಸ್ಥಳದಲ್ಲಿ ನಡೆದ ಸ್ಫೋಟ ಪ್ರಕರಣದ ಸ್ಥಳಕ್ಕೆ ಬೆಳ್ತಂಗಡಿ ಧರ್ಮಾ ಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿಸ್ಫೋಟದಿಂದ ಪೂರ್ಣ ಮತ್ತು ಅಂಶಿಕವಾಗಿ ಹಾನಿಗೊಳಗಾದ ಮನೆಗಳನ್ನು ಸಂದರ್ಶಸಿ ಮನೆಯವರಿಂದ ಘಟನೆಯ ನೇರ ಚಿತ್ರವನ್ನು ಪಡೆದರು.
ಸಾಮಾನ್ಯವಾಗಿ ಆ ಸಮಯದಲ್ಲಿ ಮನೆಯಲ್ಲಿ ಇರುವವರು ಪವಾಡ ಸದೃಶ್ಯವಾಗಿ ಅಂದು ಮನೆಯಲ್ಲಿ ಇಲ್ಲದ ಕಾರಣ ಜೀವಾಪಾಯದಿಂದ ಪಾರಾದರು ಎಂದು ಮನೆಯವರು ವಿವರಿಸಿದರು. ಒಂದು ಮನೆ ಸಂಪೂರ್ಣ ಹಾಗೂ ಇನ್ನೆರಡು ಮನೆಗಳು ಅಂಶಿಕವಾಗಿ ಹಾನಿಯಾಗಿದ್ದು ಸೂಕ್ತ ತನಿಖೆ ಮತ್ತು ಹಾನಿಗೊಳಗಾದವರಿಗೆ ಸೂಕ್ತ ಪರಿಹಾರಕ್ಕೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಗ್ರಹಿಸಿದರು.

ಧರ್ಮ ಪ್ರಾಂತ್ಯದ ವಿಕಾರ್ ಜೆನರಲ್ ಅತಿ ವಂದನಿಯ ಜೋಸ್ ವಲಿಯಪರಂಭಿಲ್, ಬೆಳ್ತಂಗಡಿ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಫೋರೋನ ಅಧ್ಯಕ್ಷರಾದ ರೆಜಿ ಜಾರ್ಜ್ ಪಡಂಗಡಿ ಹಾಗೂ ಬಿಜು ಬೆಳ್ತಂಗಡಿ ವೇಣೂರು ಧರ್ಮ ಕೇಂದ್ರದ ಸದಸ್ಯರು ಧರ್ಮಾ ಧ್ಯಕ್ಷರ ಉಪಸ್ಥಿತರಿದ್ದರು.

ವೆಂಕಪ್ಪ ಮೂಲ್ಯ, ಲೈಸ್ಸಿ ಚೆರಾಡಿ ಹಾಗೂ ಹಾನಿಗೊಳಗಾದ ಜೋಸೆಫ್ ಮಾತ್ಯು ಇವರ ಮನೆಗಳಿಗೆ ಭೇಟಿ ನೀಡಿ ಸಂತೈಸಿದರು.

Related posts

ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya
error: Content is protected !!