25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಅನುಮಾನಗಳು ಕಾಡುತ್ತಿವೆ, ಸ್ಫೋಟದ ತೀವ್ರತೆ ಎಷ್ಟಿತ್ತು ಎಂದರೆ ಕಾರ್ಮಿಕರ ದೇಹಗಳು ಚಿದ್ರ ಚಿದ್ರಾ ಗಳಾಗಿವೆ. ಹಾಗೂ ಅಲ್ಲಿ ಸ್ಫೋಟಗೊಂಡ ಕಟ್ಟಡ ಮತ್ತು ಕಟ್ಟಡದ ಹಿಂದೆ ಇರುವ ಕಲ್ಲಿನಿಂದ ನಿರ್ಮಿಸಿದ ಕಪೌಂಡ್ ಚಿದ್ರಾ ಚಿದ್ರಾಗೊಂಡಿದ್ದು ಮತ್ತು ಸುಮಾರು ಮೂರು ಕಿಲೋ ಮೀಟರ್ ವ್ಯಾಪ್ತಿಗೆ ಸ್ಫೋಟಕದ ಕಂಪನಗೊಂಡಿದ್ದು ಹಾಗೂ ಸ್ಫೋಟಕದ ತೀವ್ರತೆಗೆ ಸುಮಾರು ಹದಿನೈದಕ್ಕಿಂತ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು ಹಾನಿಗೊಳಗಾಗಿವೆ. ಹಾಗೂ ಸ್ಫೋಟಕದ ಶಬ್ದ ಹತ್ತು ಕಿಲೋ ಮೀಟರ್ ವರೆಗೆ ಕೇಳಿಸಿರುತ್ತದೆ. ಇದು ಕೇವಲ ಪಟಾಕಿಯಿಂದ ನಡೆದಿರಳು ಸಾಧ್ಯವಿಲ್ಲ ಇದರ ತೀವ್ರತೆಯನ್ನು ಗಮನಿಸಿದಾಗ ಗ್ರಾನೈಟ್ ಮಾದರಿಯ ಸ್ಫೋಟಕ ತಯಾರಾಗುತ್ತೀದೆ ಎಂದು ಅನುಮಾನ ಹುಟ್ಟಿಕೊಂಡಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಯೋಜಕ ನಿರಂಜನ್, ಜಯ ಪ್ರಸಾದ್, ಸಂತೋಷ್ ನಂದಿಬೆಟ್ಟ, ಗೋಪಾಲ್ ಶೆಟ್ಟಿ, ಧನಂಜಯ ಕುಲಾಲ್, ಜಗದೀಶ್ ಚಂದ್ರ, ಯಾದವ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya
error: Content is protected !!