ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಅನುಮಾನಗಳು ಕಾಡುತ್ತಿವೆ, ಸ್ಫೋಟದ ತೀವ್ರತೆ ಎಷ್ಟಿತ್ತು ಎಂದರೆ ಕಾರ್ಮಿಕರ ದೇಹಗಳು ಚಿದ್ರ ಚಿದ್ರಾ ಗಳಾಗಿವೆ. ಹಾಗೂ ಅಲ್ಲಿ ಸ್ಫೋಟಗೊಂಡ ಕಟ್ಟಡ ಮತ್ತು ಕಟ್ಟಡದ ಹಿಂದೆ ಇರುವ ಕಲ್ಲಿನಿಂದ ನಿರ್ಮಿಸಿದ ಕಪೌಂಡ್ ಚಿದ್ರಾ ಚಿದ್ರಾಗೊಂಡಿದ್ದು ಮತ್ತು ಸುಮಾರು ಮೂರು ಕಿಲೋ ಮೀಟರ್ ವ್ಯಾಪ್ತಿಗೆ ಸ್ಫೋಟಕದ ಕಂಪನಗೊಂಡಿದ್ದು ಹಾಗೂ ಸ್ಫೋಟಕದ ತೀವ್ರತೆಗೆ ಸುಮಾರು ಹದಿನೈದಕ್ಕಿಂತ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು ಹಾನಿಗೊಳಗಾಗಿವೆ. ಹಾಗೂ ಸ್ಫೋಟಕದ ಶಬ್ದ ಹತ್ತು ಕಿಲೋ ಮೀಟರ್ ವರೆಗೆ ಕೇಳಿಸಿರುತ್ತದೆ. ಇದು ಕೇವಲ ಪಟಾಕಿಯಿಂದ ನಡೆದಿರಳು ಸಾಧ್ಯವಿಲ್ಲ ಇದರ ತೀವ್ರತೆಯನ್ನು ಗಮನಿಸಿದಾಗ ಗ್ರಾನೈಟ್ ಮಾದರಿಯ ಸ್ಫೋಟಕ ತಯಾರಾಗುತ್ತೀದೆ ಎಂದು ಅನುಮಾನ ಹುಟ್ಟಿಕೊಂಡಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಯೋಜಕ ನಿರಂಜನ್, ಜಯ ಪ್ರಸಾದ್, ಸಂತೋಷ್ ನಂದಿಬೆಟ್ಟ, ಗೋಪಾಲ್ ಶೆಟ್ಟಿ, ಧನಂಜಯ ಕುಲಾಲ್, ಜಗದೀಶ್ ಚಂದ್ರ, ಯಾದವ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಆ್ಯಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya
error: Content is protected !!