April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

ಬೆಳ್ತಂಗಡಿ : ವೇಣೂರು ಪಟಾಕಿ ತಯಾರಿಕೆ ಮಾಡುವ ವೇಳೆ ಸ್ಫೋಟಗೊಂಡ ಪ್ರಕರಣ ಸಂಬಂಧ ಪಟಾಕಿ ಮಾರಾಟ ಮತ್ತು ಗೋಡೌನ್ ಮಳಿಗೆಗಳಿಗೆ ತಾತ್ಕಾಲಿಕ ಪರವಾನಿಗೆ ಜ.29 ರಂದು ಜಿಲ್ಲಾಧಿಕಾರಿ ರದ್ದು ಮಾಡಿದ್ದಾರೆ. ಈ ಸಂಬಂಧ ಪಟಾಕಿ ಮಾರಾಟ ಮತ್ತು ದಾಸ್ತಾನು ಗೋಡೌನ್ ಮೇಲೆ ಜ.30 ರಂದು ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.ಬೆಳ್ತಂಗಡಿ ತಾಲೂಕಿನಲ್ಲಿ ಒಟ್ಟು 9 ಕಡೆ ಪಟಾಕಿ ಮಾರಾಟ ಮತ್ತು ದಾಸ್ತಾನು ಗೋಡೌನ್ ಇದ್ದು. ಬೆಳ್ತಂಗಡಿ ತಹಶೀಲ್ದಾರ್ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಜ.30 ರಂದು ಏಕಕಾಲದಲ್ಲಿ 7 ಸ್ಥಳಗಳಿಗೆ ದಾಳಿ ಮಾಡಿ ಪರಿಶೀಲನೆ ನಡೆಸಿ ಪಟಾಕಿ ಮಾರಾಟ ಮತ್ತು ದಾಸ್ತಾನು ಮಾಡದಂತೆ ಅಂಗಡಿಗೆ ನೋಟಿಸ್ ಅಂಟಿಸಿದ್ದಾರೆ.

ಮೂರು ಪಟಾಕಿ ದಾಸ್ತಾನು ಗೋಡೌನ್ ಸೀಝ್: ಉಜಿರೆ ಪ್ರಭಾತ್ ಸ್ಟೋರ್ ,ಬೆಳ್ತಂಗಡಿ ಮುಖ್ಯರಸ್ತೆ ಬೆಳ್ತಂಗಡಿ ಜನರಲ್ ಮರ್ಚೆಂಟ್ , ಚಾಮುಂಡೇಶ್ವರಿ ಎಂಟರ್ ಪ್ರೈಸಸ್ ಬೆಳ್ತಂಗಡಿ ಇದರ ಮೂರು ಗೋಡೌನ್ ನಲ್ಲಿ ಪಟಾಕಿ ದಾಸ್ತಾನು ಮಾಡಲಾಗಿದ್ದು ಇದನ್ನು ಕಂದಾಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಮುಂದಿನ ಸರಕಾರದ ಆದೇಶದವರೆಗೂ ಬೀಗ ಹಾಕಿದ್ದಾರೆ.

ದಾಳಿ ಮಾಡಲಾದ ಪಟಾಕಿ ಅಂಗಡಿಗಳು: ಬೆಳ್ತಂಗಡಿಯ ಎಸ್.ಪುಂಡಲೀಕ ಭಟ್ ಮಾಲೀಕತ್ವದ ಪ್ರಭಾತ್ ಸ್ಟೋರ್, ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿರುವ ಕೆ.ಮಂಜುನಾಥ್ ಕಾಮತ್ ಮಾಲೀಕತ್ವದ ಜನರಲ್ ಮರ್ಚೆಂಟ್, ಬೆಳ್ತಂಗಡಿಯ ಸುಧೀರ್ ಹೊಳ್ಳ ಮಾಲೀಕತ್ವದ ಚಾಮುಂಡೇಶ್ವರಿ ಎಂಟರ್ ಪ್ರೈಸಸ್ , ಉಜಿರೆಯ ಬಿ.ರಾಜರಾಮ್ ಭಟ್ ಮಾಲೀಕತ್ವದ ಮಂಜು ಶ್ರೀ ಸ್ಟೋರ್ , ಉಜಿರೆಯ ಪ್ರಭಾತ್ ಸ್ಟೋರ್, ಪುಂಜಾಲಕಟ್ಟೆಯ ಬಿ.ವಸಂತ ಬಾಳಿಗ ಮಾಲೀಕತ್ವದ ವಸಂತ್ ಸ್ಟೋರ್ , ವೇಣೂರಿನ ಬಿ.ಮೋಹನ್ ದಾಸ್ ನಾಯಕ್ ಸೇರಿದಂತೆ ಏಳು ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ರಿಜಿನಲ್ ಫೈರ್ ಅಫಿಸರ್ ರಂಗನಾಥ್ ಮತ್ತು ಸಿಬ್ಬಂದಿಗಳು ಮತ್ತು ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!