23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

ಮೊಗ್ರು : ಇಲ್ಲಿನ ಲಕ್ಷ್ಮಿ ನಾರಾಯಣ ಭಜನಾ ಮಂದಿರ (ರಿ), ಮತ್ತು ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಸಹಯೋಗದಲ್ಲಿ
ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ‘ಎಲ್.ಎನ್. ಟ್ರೋಫಿ-2024’ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ವಠಾರದಲ್ಲಿ ಜ28ರಂದು ನಡೆಯಿತು.

ಊಂತನಾಜೆ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಅಧ್ಯಕ್ಷ ಸಂಕಪ್ಪ ಗೌಡ ಉಪ್ಪ ರವರು ಪಂದ್ಯಾಟವನ್ನು ಉದ್ಘಾಟಿಸಿದರು.
ಸಂಜೆ ನೆರವೇರಿದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷ ದಿನೇಶ್ ಖಂಡಿಗ ವಹಿಸಿ ಮಾತನಾಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಪ್ರಭಾಕರ ಗೌಡ ಗುತ್ಯೋಡಿ, ಧರ್ಣಪ್ಪ ಗೌಡ ಅತ್ಯರಕಂಡ, ಬಾಬು ಬೆಲ್ಚಾಡ ಊಂತನಾಜೆ, ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಅಧ್ಯಕ್ಷ ಸಂಕಪ್ಪ ಗೌಡ , ಮಾಜಿ ಅಧ್ಯಕ್ಷ ಶಿವಣ್ಣ ಗೌಡ ಪರಪ್ಪಾದೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಅಚುಶ್ರೀ ಬಾಂಗೇರು ಹಾಗೂ ಬಂದಾರು ಗ್ರಾಮಪಂಚಾಯತ್ ಸದಸ್ಯೆ ಮಂಜುಶ್ರೀ ಊಂತನಾಜೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶುಭಹಾರೈಸಿದರು.

ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಅಧ್ಯಕ್ಷ ನಿತಿನ್ ಕುಮಾರ್ ಊಂತನಾಜೆ , ಕಾರ್ಯದರ್ಶಿ ವಿನಿತ್ ಕುಮಾರ್ ಊಂತನಾಜೆ, ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಕಾರ್ಯದರ್ಶಿ ಗಂಗಾಧರ ಗೌಡ ದಂಡುಗ ಉಪಸ್ಥಿತರಿದ್ದರು.

ಪ್ರವೀಣ್ ಕೊಯ್ಯೂರು ಹಾಗೂ ಕೇವನ್ ತೀರ್ಪುಗಾರರಾಗಿ ಪಂದ್ಯಾಟವನ್ನು ಮುನ್ನಡೆಸಿದರು. ಜಗದೀಶ್ ಬಾರಿಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya
error: Content is protected !!