23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

ಬೆಳ್ತಂಗಡಿ: ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು. ಜನವರಿ 20 ಮತ್ತು 21ರಂದು ಸವಣೂರಿನಲ್ಲಿ ನಡೆದ ಜಿಲ್ಲಾಮಟ್ಟದ ಯುವಜನ ಮೇಳದಲ್ಲಿ ಬೆಳ್ತಂಗಡಿ ತಾಲೂಕಿನಿಂದ ಮುಂಡೂರು ಶ್ರೀ ಶಾರದಾಂಬ ಯುವಕ ಮಂಡಲವನ್ನು ಪ್ರತಿನಿಧಿಸಿ ಯುವಕರ ವೈಯಕ್ತಿಕ ವಿಭಾಗದ ಭಾವಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ಅಭಿಲಾಶ್ ಭಟ್ ಮುಂಡೂರು ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಯುವತಿಯರ ವೈಯಕ್ತಿಕ ವಿಭಾಗದ ಭಾವಗೀತೆ ಸ್ಪರ್ಧೆಯಲ್ಲಿ ಬಿ ಆರ್ ಎ ಕಲಾ ಮತ್ತು ಕ್ರೀಡಾ ಸಂಘ ಧರ್ಮಸ್ಥಳದ ಸುಪ್ರೀತಾ ಇವರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು, ರಂಗಗೀತೆಯಲ್ಲಿ ಕೀರ್ತನ ಕಲಾತಂಡ (ರಿ )ಮುಂಡಾಜೆ ಇದರ ನಾರಾಯಣಶೆಟ್ಟಿ ಇವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಗುಂಪು ಸ್ಪರ್ಧೆಯಲ್ಲಿ ಜಾನಪದ ನೃತ್ಯ ದ್ವಿತೀಯ ತುಳು ಪ್ರಾದೇಶಿಕ ನೃತ್ಯ ದ್ವಿತೀಯ, ಸೋಬಾನೆ ಹಾಡು ತೃತೀಯ, ಪಾಡ್ದನ ತೃತೀಯ, ರಾಗಿ ಬೀಸುವ ಹಾಡು ತೃತೀಯ, ಕೋಲಾಟ ತೃತೀಯ ಸ್ಥಾನಗಳನ್ನು ಬಿ ಆರ್ ಎ ಕಲಾ ಮತ್ತು ಕ್ರೀಡಾ ಸಂಘವು ಪಡೆದಿರುತ್ತದೆ.

ಗುಂಪು ಸ್ಪರ್ಧೆಯಾದ ರಂಗಗೀತೆಯಲ್ಲಿ ಕೀರ್ತನ ಕಲಾತಂಡ ಮುಂಡಾಜೆ ತೃತೀಯ ಸ್ಥಾನವನ್ನು ಪಡೆದಿರುತ್ತದೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!